5:09 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಬಾಂಧವ್ಯ ಬೆಸೆಯುತ್ತದೆ: ಬಾಲಚಂದ್ರ ಜಾರಕಿಹೊಳಿ

08/09/2024, 22:56

ಸಂತೋಷ್ ಬೆಳಗಾವಿ.

info.reporterkarnataka@gmail.com

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಪರಸ್ಪರರಲ್ಲಿ ಬಾಂಧವ್ಯ ಬೆಸೆಯುತ್ತವೆ. ಜಾತ್ರೆಯಲ್ಲಿ ಅನೇಕ ಮಹಾತ್ಮರನ್ನು ಕರೆಯಿಸಿ ಒಳ್ಳೆಯ ವಿಚಾರಗಳನ್ನು ಹೇಳಿಸಿ ಜಾತ್ರೆಯನ್ನು ವಿಶೇಷವಾಗಿ ಮಾಡಿ ಗ್ರಾಮವನ್ನು ಉದ್ದಾರ ಮಾಡುತ್ತಿರುವ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅವರು ಶಿವಾಪೂರ(ಹ) ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಭಾರತ ದೇಶದಲ್ಲಿ ನೂರಾರು ಜಾತಿ, ಧರ್ಮ ಜನಾಂಗಗಳಿವೆ ಪೂಜ್ಯರ ದೇವರ ಆಶೀರ್ವಾದದಿಂದ ಎಲ್ಲರೂ ಭಾರತದಲ್ಲಿ ಸಹಬಾಳ್ವೆಯಿಂದ ಒಗ್ಗಟ್ಟಾಗಿದ್ದೇವೆ. ಆದರೆ ಬಾಂಗ್ಲಾ ದೇಶದಂತಹ ದೇಶಗಳಲ್ಲಿ ಒಂದೇ ಜನಾಂಗದವರಿದ್ದರು ಅಲ್ಲಿ ದಂಗೆಗಳಾಗುತ್ತಿವೆ. ಶ್ರೀ ಮಠದ ಹಾಗೂ ಧಾರ್ಮಿಕ ಕಾರ್ಯಕ್ರಮದ ವಿಚಾರದಲ್ಲಿ ಯಾರು ಕೂಡಾ ರಾಜಕೀಯ ಹಾಗೂ ಜಾತಿ ಬೇಧ ಭಾವ ಮಾಡಬಾರದು. ತಮ್ಮ ಮಕ್ಕಳಿಗೆ ಧಾರ್ಮಿಕತೆಯ ಜೊತೆಗೆ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶ್ರೀ ಮಠಕ್ಕೆ ಎಲ್ಲ ರೀತಿಯ ಸಹಾಯ ಸಹಕಾರ ಮಾಡುತ್ತೇವೆ ಎಂದು ಹೇಳಿದರು. ಸಾನಿಧ್ಯವನ್ನು ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮಿಜಿ. ವೀರೇಶ್ವರ ಸ್ವಾಮಿಜಿ. ಅಭಿನವ ಚನ್ನಬಸವ ಸ್ವಾಮೀಜಿ ಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು