3:35 AM Sunday3 - May 2026
ಬ್ರೇಕಿಂಗ್ ನ್ಯೂಸ್
ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ…

ಇತ್ತೀಚಿನ ಸುದ್ದಿ

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಬಾಂಧವ್ಯ ಬೆಸೆಯುತ್ತದೆ: ಬಾಲಚಂದ್ರ ಜಾರಕಿಹೊಳಿ

08/09/2024, 22:56

ಸಂತೋಷ್ ಬೆಳಗಾವಿ.

info.reporterkarnataka@gmail.com

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಪರಸ್ಪರರಲ್ಲಿ ಬಾಂಧವ್ಯ ಬೆಸೆಯುತ್ತವೆ. ಜಾತ್ರೆಯಲ್ಲಿ ಅನೇಕ ಮಹಾತ್ಮರನ್ನು ಕರೆಯಿಸಿ ಒಳ್ಳೆಯ ವಿಚಾರಗಳನ್ನು ಹೇಳಿಸಿ ಜಾತ್ರೆಯನ್ನು ವಿಶೇಷವಾಗಿ ಮಾಡಿ ಗ್ರಾಮವನ್ನು ಉದ್ದಾರ ಮಾಡುತ್ತಿರುವ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅವರು ಶಿವಾಪೂರ(ಹ) ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಭಾರತ ದೇಶದಲ್ಲಿ ನೂರಾರು ಜಾತಿ, ಧರ್ಮ ಜನಾಂಗಗಳಿವೆ ಪೂಜ್ಯರ ದೇವರ ಆಶೀರ್ವಾದದಿಂದ ಎಲ್ಲರೂ ಭಾರತದಲ್ಲಿ ಸಹಬಾಳ್ವೆಯಿಂದ ಒಗ್ಗಟ್ಟಾಗಿದ್ದೇವೆ. ಆದರೆ ಬಾಂಗ್ಲಾ ದೇಶದಂತಹ ದೇಶಗಳಲ್ಲಿ ಒಂದೇ ಜನಾಂಗದವರಿದ್ದರು ಅಲ್ಲಿ ದಂಗೆಗಳಾಗುತ್ತಿವೆ. ಶ್ರೀ ಮಠದ ಹಾಗೂ ಧಾರ್ಮಿಕ ಕಾರ್ಯಕ್ರಮದ ವಿಚಾರದಲ್ಲಿ ಯಾರು ಕೂಡಾ ರಾಜಕೀಯ ಹಾಗೂ ಜಾತಿ ಬೇಧ ಭಾವ ಮಾಡಬಾರದು. ತಮ್ಮ ಮಕ್ಕಳಿಗೆ ಧಾರ್ಮಿಕತೆಯ ಜೊತೆಗೆ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶ್ರೀ ಮಠಕ್ಕೆ ಎಲ್ಲ ರೀತಿಯ ಸಹಾಯ ಸಹಕಾರ ಮಾಡುತ್ತೇವೆ ಎಂದು ಹೇಳಿದರು. ಸಾನಿಧ್ಯವನ್ನು ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮಿಜಿ. ವೀರೇಶ್ವರ ಸ್ವಾಮಿಜಿ. ಅಭಿನವ ಚನ್ನಬಸವ ಸ್ವಾಮೀಜಿ ಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು