8:38 PM Sunday2 - November 2025
ಬ್ರೇಕಿಂಗ್ ನ್ಯೂಸ್
ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ

ಇತ್ತೀಚಿನ ಸುದ್ದಿ

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಬಾಂಧವ್ಯ ಬೆಸೆಯುತ್ತದೆ: ಬಾಲಚಂದ್ರ ಜಾರಕಿಹೊಳಿ

08/09/2024, 22:56

ಸಂತೋಷ್ ಬೆಳಗಾವಿ.

info.reporterkarnataka@gmail.com

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಪರಸ್ಪರರಲ್ಲಿ ಬಾಂಧವ್ಯ ಬೆಸೆಯುತ್ತವೆ. ಜಾತ್ರೆಯಲ್ಲಿ ಅನೇಕ ಮಹಾತ್ಮರನ್ನು ಕರೆಯಿಸಿ ಒಳ್ಳೆಯ ವಿಚಾರಗಳನ್ನು ಹೇಳಿಸಿ ಜಾತ್ರೆಯನ್ನು ವಿಶೇಷವಾಗಿ ಮಾಡಿ ಗ್ರಾಮವನ್ನು ಉದ್ದಾರ ಮಾಡುತ್ತಿರುವ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅವರು ಶಿವಾಪೂರ(ಹ) ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಭಾರತ ದೇಶದಲ್ಲಿ ನೂರಾರು ಜಾತಿ, ಧರ್ಮ ಜನಾಂಗಗಳಿವೆ ಪೂಜ್ಯರ ದೇವರ ಆಶೀರ್ವಾದದಿಂದ ಎಲ್ಲರೂ ಭಾರತದಲ್ಲಿ ಸಹಬಾಳ್ವೆಯಿಂದ ಒಗ್ಗಟ್ಟಾಗಿದ್ದೇವೆ. ಆದರೆ ಬಾಂಗ್ಲಾ ದೇಶದಂತಹ ದೇಶಗಳಲ್ಲಿ ಒಂದೇ ಜನಾಂಗದವರಿದ್ದರು ಅಲ್ಲಿ ದಂಗೆಗಳಾಗುತ್ತಿವೆ. ಶ್ರೀ ಮಠದ ಹಾಗೂ ಧಾರ್ಮಿಕ ಕಾರ್ಯಕ್ರಮದ ವಿಚಾರದಲ್ಲಿ ಯಾರು ಕೂಡಾ ರಾಜಕೀಯ ಹಾಗೂ ಜಾತಿ ಬೇಧ ಭಾವ ಮಾಡಬಾರದು. ತಮ್ಮ ಮಕ್ಕಳಿಗೆ ಧಾರ್ಮಿಕತೆಯ ಜೊತೆಗೆ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶ್ರೀ ಮಠಕ್ಕೆ ಎಲ್ಲ ರೀತಿಯ ಸಹಾಯ ಸಹಕಾರ ಮಾಡುತ್ತೇವೆ ಎಂದು ಹೇಳಿದರು. ಸಾನಿಧ್ಯವನ್ನು ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮಿಜಿ. ವೀರೇಶ್ವರ ಸ್ವಾಮಿಜಿ. ಅಭಿನವ ಚನ್ನಬಸವ ಸ್ವಾಮೀಜಿ ಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು