5:12 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಬಾಂಧವ್ಯ ಬೆಸೆಯುತ್ತದೆ: ಬಾಲಚಂದ್ರ ಜಾರಕಿಹೊಳಿ

08/09/2024, 22:56

ಸಂತೋಷ್ ಬೆಳಗಾವಿ.

info.reporterkarnataka@gmail.com

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಪರಸ್ಪರರಲ್ಲಿ ಬಾಂಧವ್ಯ ಬೆಸೆಯುತ್ತವೆ. ಜಾತ್ರೆಯಲ್ಲಿ ಅನೇಕ ಮಹಾತ್ಮರನ್ನು ಕರೆಯಿಸಿ ಒಳ್ಳೆಯ ವಿಚಾರಗಳನ್ನು ಹೇಳಿಸಿ ಜಾತ್ರೆಯನ್ನು ವಿಶೇಷವಾಗಿ ಮಾಡಿ ಗ್ರಾಮವನ್ನು ಉದ್ದಾರ ಮಾಡುತ್ತಿರುವ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅವರು ಶಿವಾಪೂರ(ಹ) ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಭಾರತ ದೇಶದಲ್ಲಿ ನೂರಾರು ಜಾತಿ, ಧರ್ಮ ಜನಾಂಗಗಳಿವೆ ಪೂಜ್ಯರ ದೇವರ ಆಶೀರ್ವಾದದಿಂದ ಎಲ್ಲರೂ ಭಾರತದಲ್ಲಿ ಸಹಬಾಳ್ವೆಯಿಂದ ಒಗ್ಗಟ್ಟಾಗಿದ್ದೇವೆ. ಆದರೆ ಬಾಂಗ್ಲಾ ದೇಶದಂತಹ ದೇಶಗಳಲ್ಲಿ ಒಂದೇ ಜನಾಂಗದವರಿದ್ದರು ಅಲ್ಲಿ ದಂಗೆಗಳಾಗುತ್ತಿವೆ. ಶ್ರೀ ಮಠದ ಹಾಗೂ ಧಾರ್ಮಿಕ ಕಾರ್ಯಕ್ರಮದ ವಿಚಾರದಲ್ಲಿ ಯಾರು ಕೂಡಾ ರಾಜಕೀಯ ಹಾಗೂ ಜಾತಿ ಬೇಧ ಭಾವ ಮಾಡಬಾರದು. ತಮ್ಮ ಮಕ್ಕಳಿಗೆ ಧಾರ್ಮಿಕತೆಯ ಜೊತೆಗೆ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶ್ರೀ ಮಠಕ್ಕೆ ಎಲ್ಲ ರೀತಿಯ ಸಹಾಯ ಸಹಕಾರ ಮಾಡುತ್ತೇವೆ ಎಂದು ಹೇಳಿದರು. ಸಾನಿಧ್ಯವನ್ನು ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮಿಜಿ. ವೀರೇಶ್ವರ ಸ್ವಾಮಿಜಿ. ಅಭಿನವ ಚನ್ನಬಸವ ಸ್ವಾಮೀಜಿ ಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು