10:18 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಜಾತ್ರೆಗೆ ಬಂದ ಯುವಕರ ಮೇಲೆ ಚೂರಿ ದಾಳಿ: ಓರ್ವ ಸಾವು; ಇನ್ನೊಬ್ಬ ಗಂಭೀರ ಗಾಯ

23/12/2022, 11:01

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ಆಗಮಿಸಿದ್ದ ಇಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆಗೈದಿದ್ದರಿಂದ ಓರ್ವ ಸಾವಿಗೀಡಾಗಿ, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ಸಂಭವಿಸಿದೆ.

ಅಥಣಿ ಪಟ್ಟಣದವರಾದ ಗಣೇಶ ಪಂಡಿತ ಸಿಕ್ಕಲಗಾರ (23) ಮೃತನಾಗಿದ್ದು, ನರೇಂದ್ರ ಸಂಜಯ ಘಟಕಾಂಬಳೆ (32) ಗಂಭೀರ ಗಾಯಗೊಂಡಿದ್ದಾರೆ. ಗ್ರಾಮದ ಪಾಟಣಕರ ಗದ್ದೆಯ ಬಸ್‌ ನಿಲ್ದಾಣದ ಹಿಂದುಗಡೆ ಘಟನೆ ಜರುಗಿದೆ. ಚಾಕು ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡ ಗಣೇಶ ಹಾಗೂ ನರೇಂದ್ರ ಚೀರಾಡುತ್ತಾ ಗದ್ದೆಯಲ್ಲಿ ಬಿದ್ದಿರುವ ಸಪ್ಪಳ ಕೇಳಿಸಿಕೊಂಡ, ಅಲ್ಲಿನ ನಿವಾಸಿಗಳು ಆಂಬುಲೆನ್ಸ್ ವಾಹನಕ್ಕೆ ಕರೆ ಮಾಡಿದ್ದಾರೆ. ನಂತರ ಕೊಕಟನೂರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಅಲ್ಲಿಂದ ಕರೆದೊಯ್ದು ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಾಗಲೇ ಗಣೇಶ ಸಿಕ್ಕಲಗಾರ ಸಾವಿಗೀಡಾಗಿದ್ದಾನೆ. ಗಾಯಗೊಂಡ ನರೇಂದ್ರನನ್ನು ಅಥಣಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ಕುರಿತು ಐಗಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಮಹಾನಿಂಗ ನಂದಗಾಂವಿ, ಅಥಣಿ ಡಿವೈಎಸ್‌ಪಿ ಶ್ರೀಪಾದ ಜಲ್ಲೆ, ಸಿಪಿಐ ರವೀಂದ್ರ ನಾಯ್ಕಡಿ, ಪಿಎಸ್‌ಐಗಳಾದ ಶಿವರಾಜ ಧರಿಗೋಣ, ಶಿವಾಜಿ ಪವಾರ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು