8:16 AM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಜಾತ್ರೆಯಲ್ಲಿ ಕೈಹಿಡಿದು ಎಳೆದ ಯುವಕ: ಮನನೊಂದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

29/01/2023, 14:56

ರಾಹುಲ್ ಅಥಣಿ ಬೆಳಗಾವಿ

info.reporterkarnataka agnail.com

ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಜಾತ್ರೆಯಲ್ಲಿ ಯುವಕನೋರ್ವ ತನ್ನ ಕೈಹಿಡಿದು ಎಳೆದಾಡಿದ್ದಾನೆಂದು ಮನನೊಂದು ಖಿನ್ನತೆಗೆ ಒಳಗಾಗಿ ಯುವತಿಯೋರ್ವಳು ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸಂಕೋನಟ್ಟಿ ಗ್ರಾಮದ ಸ್ವಪ್ನಾ ಸುಭಾಷ ಹಿಪ್ಪರಗಿ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಂಕೋನಟ್ಟಿ ಗ್ರಾಮದ ಸುನೀಲ ಅಣ್ಣಪ್ಪ ಧರಿಗೌಡ ಕೈ ಹಿಡಿದು ಎಳೆದಾಡಿದ ಯುವಕ ಎಂದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಘಟನೆ ವಿವರ : ಸುನೀಲ ಧರಿಗೌಡರ ಜತೆ ಸ್ವಪ್ನಾಳನ್ನು ವಿವಾಹ ಮಾಡಿಕೊಡಿ ಎಂದು ಸುನೀಲ ತಂದೆ-ತಾಯಿ ಈಚೆಗೆ ಯುವತಿಯ ಮನೆಗೆ ಬಂದು ಕೇಳಿದ್ದರು. ಮಗಳಿಗೆ ಈಗಲೇ ಮದುವೆ ಮಾಡುವುದಿಲ್ಲ ಎಂದು ಸ್ವಪ್ನಾಳ ತಂದೆ ಸುಭಾಷ ಹೇಳಿದ್ದರು. ಅದೇ ಸಿಟ್ಟಿನಲ್ಲಿ ಜ.25 ರಂದು ಜಾತ್ರೆಯಲ್ಲಿ ಸುನೀಲನು ಸ್ವಪ್ನಾಳನ್ನು ಕೈ ಹಿಡಿದು ಎಳೆದಿದ್ದ. ಇದರಿಂದ ಮನನೊಂದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು