4:27 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಜಾತ್ರೆಯಲ್ಲಿ ಕೈಹಿಡಿದು ಎಳೆದ ಯುವಕ: ಮನನೊಂದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

29/01/2023, 14:56

ರಾಹುಲ್ ಅಥಣಿ ಬೆಳಗಾವಿ

info.reporterkarnataka agnail.com

ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಜಾತ್ರೆಯಲ್ಲಿ ಯುವಕನೋರ್ವ ತನ್ನ ಕೈಹಿಡಿದು ಎಳೆದಾಡಿದ್ದಾನೆಂದು ಮನನೊಂದು ಖಿನ್ನತೆಗೆ ಒಳಗಾಗಿ ಯುವತಿಯೋರ್ವಳು ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸಂಕೋನಟ್ಟಿ ಗ್ರಾಮದ ಸ್ವಪ್ನಾ ಸುಭಾಷ ಹಿಪ್ಪರಗಿ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಂಕೋನಟ್ಟಿ ಗ್ರಾಮದ ಸುನೀಲ ಅಣ್ಣಪ್ಪ ಧರಿಗೌಡ ಕೈ ಹಿಡಿದು ಎಳೆದಾಡಿದ ಯುವಕ ಎಂದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಘಟನೆ ವಿವರ : ಸುನೀಲ ಧರಿಗೌಡರ ಜತೆ ಸ್ವಪ್ನಾಳನ್ನು ವಿವಾಹ ಮಾಡಿಕೊಡಿ ಎಂದು ಸುನೀಲ ತಂದೆ-ತಾಯಿ ಈಚೆಗೆ ಯುವತಿಯ ಮನೆಗೆ ಬಂದು ಕೇಳಿದ್ದರು. ಮಗಳಿಗೆ ಈಗಲೇ ಮದುವೆ ಮಾಡುವುದಿಲ್ಲ ಎಂದು ಸ್ವಪ್ನಾಳ ತಂದೆ ಸುಭಾಷ ಹೇಳಿದ್ದರು. ಅದೇ ಸಿಟ್ಟಿನಲ್ಲಿ ಜ.25 ರಂದು ಜಾತ್ರೆಯಲ್ಲಿ ಸುನೀಲನು ಸ್ವಪ್ನಾಳನ್ನು ಕೈ ಹಿಡಿದು ಎಳೆದಿದ್ದ. ಇದರಿಂದ ಮನನೊಂದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು