2:00 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಜವಾದ್ ಚಂಡಮಾರುತ: ಒಡಿಶಾ, ಆಂಧ್ರ, ಪಶ್ಚಿಮ ಬಂಗಾಳ ತೀರಕ್ಕೆ ಅಪ್ಪಳಿಸುವ ನಿರೀಕ್ಷೆ; ಎಚ್ಚರಿಕೆ ಕ್ರಮ

03/12/2021, 14:56

ಹೊಸದಿಲ್ಲಿ(reporterkarnataka.com): ಅಕಾಲಿಕ ಮಳೆಯಿಂದಾಗಿ ದೇಶವೇ ತತ್ತರಿಸಿರುವ ನಡುವೆ ಮತ್ತೊಂದು ಚಂಡಮಾರುತ ಜವಾದ್ ಭಾರತಕ್ಕೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಜವಾದ್ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಇಂದು ಈ ಚಂಡಮಾರುತ ಉತ್ತರ ಆಂಧ್ರಪ್ರದೇಶ ಮತ್ತು ದಕ್ಷಿಣ ಒಡಿಶಾ ಕರಾವಳಿ ತಲುಪುವ ಸಾಧ್ಯತೆ ಇದೆ.

ಇಂದು ಬೆಳಗ್ಗೆ ಪಶ್ಚಿಮ-ಮಧ್ಯ ಭಾಗದ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರವಾಗಿದ್ದು, ಆಳವಾದ ವಾಯುಭಾರ ಕುಸಿತವಾಗಿದೆ. ಈ ಹಿನ್ನೆಲೆ ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ನಾಳೆ ಈ ಚಂಡಮಾರುತ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಥೈಲ್ಯಾಂಡ್‌ನ ಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿ ಗಾಳಿ ಏಳಲಿದ್ದು, ಅದು ಚಂಡಮಾರುತದ ಸ್ವರೂಪ ಪಡೆಯಲಿದೆ. ನಂತರ ಅಂಡಮಾನ್ ಸಾಗರದ ದಕ್ಷಿಣ ಕರಾವಳಿ ಮೂಲಕ ಡಿ.4ರಂದು ಭಾರತ ಪ್ರವೇಶಿಸಲಿದ್ದು, ಇದರಿಂದ ಅತೀ ಹೆಚ್ಚು ಮಳೆಯಾಗಲಿದೆ. ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಭೂಕುಸಿತದ ಸಾಧ್ಯತೆ  ಇದೆ. ತಗ್ಗು ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಮತ್ತು ಬೆಳೆಗಳಿಗೆ, ಮುಖ್ಯವಾಗಿ ಭತ್ತದ ಬೆಳೆಗೆ ನಷ್ಟವಾಗುವ ಭೀತಿ ಇದೆ.

ಜವಾದ್ ಚಂಡಮಾರುತದಿಂದ ಉಂಟಾಗಲಿರುವ ಪರಿಸ್ಥಿತಿ ಎದುರಿಸಲು ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳು ಹಾಗೂ ಸಂಬಂಧಿಸಿದ ಸಂಸ್ಥೆಗಳು ಕೈಗೊಂಡಿರುವ ಸಿದ್ಧತೆ ಕುರಿತು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು