1:05 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ದುರಸ್ತಿಯ ಭಾಗ್ಯ ಕಾಣದ ಜಯಪುರ- ಬಸರೀಕಟ್ಟೆ ರಸ್ತೆ: ಸಂಸದರು, ಶಾಸಕರು ನೋಡಿ ಹೋದರೂ ನೋ ಯೂಸ್

15/07/2025, 14:06

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಕಳೆದ ವರ್ಷ ಸುರಿದ ಭಾರೀ ಮಳೆಗೆ ಜಯಪುರದಿಂದ ಬಸರೀಕಟ್ಟೆ ಸಂಪರ್ಕಿಸುವ ಬಿಳಾಲುಕೊಪ್ಪ ಬಳಿ ಹಳ್ಳದ ನೀರು ರಸ್ತೆಯಲ್ಲೆ ಹರಿದು ಹೋಗಿ ರಸ್ತೆ ಹಾಗೂ ಚರಂಡಿ ಕೊಚ್ಚಿಹೋಗಿತ್ತು.
ಆಗ ಸ್ಥಳಕ್ಕೆ ಆಗಮಿಸಿದ್ದ ಸಂಸದರು, ಜಿಲ್ಲಾಧಿಕಾರಿಗಳು, ಶಾಸಕರು ಸ್ಥಳಕ್ಕೆ ಭೇಟಿಯನ್ನು ನೀಡಿದ್ದರು, ಆದರೂ ರಸ್ತೆ ಸರಿಪಡಿಸುವುದು ಬಿಡಿ ಸರಿಯಾದ ಚರಂಡಿಯ ವ್ಯವಸ್ಥೆಯೂ ಆಗದೆ ಹಾಗೆ ಇದೆ.
ಕಳೆದ ವರ್ಷ ಸುರಿದ ಮಳೆಗೆ ಚರಂಡಿಗಳು ಕೊರೆದು ಹೋಗಿದ್ದು, ಈ ಭಾರೀ ಚರಂಡಿ ಜೊತೆಗೆ ರಸ್ತೆಯೂ ಬಿರುಕು ಬಿಟ್ಟು ಕುಸಿಯುವ ಭೀತಿ ಎದುರಾಗಿದೆ. ಅದು ಅಲ್ಲದೇ ಮಳೆ ಬಂದಾಗ ರಸ್ತೆಯಲ್ಲೆ ಹರಿಯುವ ನೀರಿನಿಂದ ರಸ್ತೆ ಪಕ್ಕದಲ್ಲಿ ದೊಡ್ಡ ಕಂದಕವೂ ಸೃಷ್ಟಿಯಾಗಿ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.


ಹೊರನಾಡು-ಶೃಂಗೇರಿಯ ಮುಖ್ಯ ರಸ್ತೆಯು ಇದಾಗಿದ್ದು ನಿತ್ಯ ಸಂಚರಿಸುವ ವಾಹನ ಸವಾರರಿಗೂ ಈ ರಸ್ತೆ ಸವಾಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು