4:50 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ದುರಸ್ತಿಯ ಭಾಗ್ಯ ಕಾಣದ ಜಯಪುರ- ಬಸರೀಕಟ್ಟೆ ರಸ್ತೆ: ಸಂಸದರು, ಶಾಸಕರು ನೋಡಿ ಹೋದರೂ ನೋ ಯೂಸ್

15/07/2025, 14:06

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಕಳೆದ ವರ್ಷ ಸುರಿದ ಭಾರೀ ಮಳೆಗೆ ಜಯಪುರದಿಂದ ಬಸರೀಕಟ್ಟೆ ಸಂಪರ್ಕಿಸುವ ಬಿಳಾಲುಕೊಪ್ಪ ಬಳಿ ಹಳ್ಳದ ನೀರು ರಸ್ತೆಯಲ್ಲೆ ಹರಿದು ಹೋಗಿ ರಸ್ತೆ ಹಾಗೂ ಚರಂಡಿ ಕೊಚ್ಚಿಹೋಗಿತ್ತು.
ಆಗ ಸ್ಥಳಕ್ಕೆ ಆಗಮಿಸಿದ್ದ ಸಂಸದರು, ಜಿಲ್ಲಾಧಿಕಾರಿಗಳು, ಶಾಸಕರು ಸ್ಥಳಕ್ಕೆ ಭೇಟಿಯನ್ನು ನೀಡಿದ್ದರು, ಆದರೂ ರಸ್ತೆ ಸರಿಪಡಿಸುವುದು ಬಿಡಿ ಸರಿಯಾದ ಚರಂಡಿಯ ವ್ಯವಸ್ಥೆಯೂ ಆಗದೆ ಹಾಗೆ ಇದೆ.
ಕಳೆದ ವರ್ಷ ಸುರಿದ ಮಳೆಗೆ ಚರಂಡಿಗಳು ಕೊರೆದು ಹೋಗಿದ್ದು, ಈ ಭಾರೀ ಚರಂಡಿ ಜೊತೆಗೆ ರಸ್ತೆಯೂ ಬಿರುಕು ಬಿಟ್ಟು ಕುಸಿಯುವ ಭೀತಿ ಎದುರಾಗಿದೆ. ಅದು ಅಲ್ಲದೇ ಮಳೆ ಬಂದಾಗ ರಸ್ತೆಯಲ್ಲೆ ಹರಿಯುವ ನೀರಿನಿಂದ ರಸ್ತೆ ಪಕ್ಕದಲ್ಲಿ ದೊಡ್ಡ ಕಂದಕವೂ ಸೃಷ್ಟಿಯಾಗಿ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.


ಹೊರನಾಡು-ಶೃಂಗೇರಿಯ ಮುಖ್ಯ ರಸ್ತೆಯು ಇದಾಗಿದ್ದು ನಿತ್ಯ ಸಂಚರಿಸುವ ವಾಹನ ಸವಾರರಿಗೂ ಈ ರಸ್ತೆ ಸವಾಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು