8:52 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಜಯಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ತಪ್ಪಿಸಿದ್ರ ತಾಪಂ ಇಓ?: ಗ್ರಾಪಂ ಮಾಡಿದ ಆರೋಪಗಳೇನು?; ನ್ಯಾಯಾಲಯಕ್ಕೆ ಹೋಗಲು ಸಿದ್ಧತೆ

30/09/2024, 21:09

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸರ್ಕಾರ ಆದೇಶ ಮಾಡಿದ ಕಾರಣದಿಂದ ಜಯಪುರ ಗ್ರಾಮ ಪಂಚಾಯಿತಿಗೆ ದಾಖಲೆ ಪರಿಶೀಲನೆಗೆ ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯನ್ನು ನಿಯೋಜನೆ ಮಾಡಲಾಗಿತ್ತು.
20/9/2024 ರಂದು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ಮಾಡಿರುತ್ತಾರೆ.
ಆದರೆ ಸರ್ಕಾರದಿಂದ ಬಂದಿದ್ದ 134 ಪ್ರಶ್ನೆಗಳಿಗೆ ಸುಮಾರು 500 ಅಂಕಗಳು ಇರುತ್ತವೆ.
ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯವರು ಕೇವಲ 10 ರಿಂದ15 ನಿಮಿಷದಲ್ಲಿ ಪರಿಶೀಲನೆ ಮಾಡಿದ್ದಾರೆ.
ಜಯಪುರ ಗ್ರಾಮ ಪಂಚಾಯತಿ ಯಲ್ಲಿ ದಾಖಲೆಗಳು ಸರಿಯಾಗಿ ಇದ್ದರು ಅವರು ಸರಿಯಾಗಿ ಪರಿಶೀಲನೆ ಮಾಡದೆ ಕಾಟಚಾರಕ್ಕೆ ಪರಿಶೀಲನೆ ಮಾಡಿ ಹೋಗಿ ಜಯಪುರ ಗ್ರಾಮ ಪಂಚಾಯಿತಿಗೆ ಸಿಗಬೇಕಿದ್ದ ಗಾಂಧಿ ಗ್ರಾಮ ಪುರಸ್ಕಾರವನ್ನು ತಪ್ಪಿಸಿದ್ದಾರೆ ಎಂದು ಜಯಪುರ ಗ್ರಾಮ ಪಂಚಾಯತಿ ಅವರು ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೇಲೆ ಅಕ್ರೋಶ ಹೊರಹಾಕಿದ್ದಾರೆ.

ಪರಿಶೀಲನೆ ಮಾಡಿ ನಮಗೆ ಮೊದಲು 401 ಅಂಕಗಳನ್ನು ನೀಡಿ ನಮ್ಮನ್ನು ಆಯ್ಕೆ ಮಾಡಿದ್ದರು.
ಈಗ ಮತ್ತೆ 328 ಅಂಕಗಳನ್ನು ನೀಡಿ ಸುಮಾರು 73 ಅಂಕಗಳನ್ನು ಕಡಿಮೆ ಮಾಡಿ ನಮಗೆ ಪ್ರಶಸ್ತಿಯನ್ನು ತಪ್ಪಿಸಿದ್ದಾರೆ.
ನಮಗೆ 401 ಅಂಕಗಳು ಮೊದಲು ಕೊಟ್ಟು ಈಗ 73 ಅಂಕ ಕಡಿಮೆ ಮಾಡಿ 328 ಅಂಕ ಮಾಡಿದ್ಯಾಕೆ?.ನಮಗೆ 73 ಅಂಕಗಳು ಕಡಿಮೆ ಹೇಗೆ ಆಯ್ತು?.ನಮಗೆ ಮಾಹಿತಿ ನೀಡಬೇಕು ಎಂಬುದು ಜಯಪುರ ಗ್ರಾಮ ಪಂಚಾಯತಿ ಅವರ ಬೇಡಿಕೆ.

ಇತ್ತೀಚಿನ ಸುದ್ದಿ

ಜಾಹೀರಾತು