11:46 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಜಯಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ತಪ್ಪಿಸಿದ್ರ ತಾಪಂ ಇಓ?: ಗ್ರಾಪಂ ಮಾಡಿದ ಆರೋಪಗಳೇನು?; ನ್ಯಾಯಾಲಯಕ್ಕೆ ಹೋಗಲು ಸಿದ್ಧತೆ

30/09/2024, 21:09

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸರ್ಕಾರ ಆದೇಶ ಮಾಡಿದ ಕಾರಣದಿಂದ ಜಯಪುರ ಗ್ರಾಮ ಪಂಚಾಯಿತಿಗೆ ದಾಖಲೆ ಪರಿಶೀಲನೆಗೆ ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯನ್ನು ನಿಯೋಜನೆ ಮಾಡಲಾಗಿತ್ತು.
20/9/2024 ರಂದು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ಮಾಡಿರುತ್ತಾರೆ.
ಆದರೆ ಸರ್ಕಾರದಿಂದ ಬಂದಿದ್ದ 134 ಪ್ರಶ್ನೆಗಳಿಗೆ ಸುಮಾರು 500 ಅಂಕಗಳು ಇರುತ್ತವೆ.
ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯವರು ಕೇವಲ 10 ರಿಂದ15 ನಿಮಿಷದಲ್ಲಿ ಪರಿಶೀಲನೆ ಮಾಡಿದ್ದಾರೆ.
ಜಯಪುರ ಗ್ರಾಮ ಪಂಚಾಯತಿ ಯಲ್ಲಿ ದಾಖಲೆಗಳು ಸರಿಯಾಗಿ ಇದ್ದರು ಅವರು ಸರಿಯಾಗಿ ಪರಿಶೀಲನೆ ಮಾಡದೆ ಕಾಟಚಾರಕ್ಕೆ ಪರಿಶೀಲನೆ ಮಾಡಿ ಹೋಗಿ ಜಯಪುರ ಗ್ರಾಮ ಪಂಚಾಯಿತಿಗೆ ಸಿಗಬೇಕಿದ್ದ ಗಾಂಧಿ ಗ್ರಾಮ ಪುರಸ್ಕಾರವನ್ನು ತಪ್ಪಿಸಿದ್ದಾರೆ ಎಂದು ಜಯಪುರ ಗ್ರಾಮ ಪಂಚಾಯತಿ ಅವರು ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೇಲೆ ಅಕ್ರೋಶ ಹೊರಹಾಕಿದ್ದಾರೆ.

ಪರಿಶೀಲನೆ ಮಾಡಿ ನಮಗೆ ಮೊದಲು 401 ಅಂಕಗಳನ್ನು ನೀಡಿ ನಮ್ಮನ್ನು ಆಯ್ಕೆ ಮಾಡಿದ್ದರು.
ಈಗ ಮತ್ತೆ 328 ಅಂಕಗಳನ್ನು ನೀಡಿ ಸುಮಾರು 73 ಅಂಕಗಳನ್ನು ಕಡಿಮೆ ಮಾಡಿ ನಮಗೆ ಪ್ರಶಸ್ತಿಯನ್ನು ತಪ್ಪಿಸಿದ್ದಾರೆ.
ನಮಗೆ 401 ಅಂಕಗಳು ಮೊದಲು ಕೊಟ್ಟು ಈಗ 73 ಅಂಕ ಕಡಿಮೆ ಮಾಡಿ 328 ಅಂಕ ಮಾಡಿದ್ಯಾಕೆ?.ನಮಗೆ 73 ಅಂಕಗಳು ಕಡಿಮೆ ಹೇಗೆ ಆಯ್ತು?.ನಮಗೆ ಮಾಹಿತಿ ನೀಡಬೇಕು ಎಂಬುದು ಜಯಪುರ ಗ್ರಾಮ ಪಂಚಾಯತಿ ಅವರ ಬೇಡಿಕೆ.

ಇತ್ತೀಚಿನ ಸುದ್ದಿ

ಜಾಹೀರಾತು