3:31 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಜಯಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ತಪ್ಪಿಸಿದ್ರ ತಾಪಂ ಇಓ?: ಗ್ರಾಪಂ ಮಾಡಿದ ಆರೋಪಗಳೇನು?; ನ್ಯಾಯಾಲಯಕ್ಕೆ ಹೋಗಲು ಸಿದ್ಧತೆ

30/09/2024, 21:09

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸರ್ಕಾರ ಆದೇಶ ಮಾಡಿದ ಕಾರಣದಿಂದ ಜಯಪುರ ಗ್ರಾಮ ಪಂಚಾಯಿತಿಗೆ ದಾಖಲೆ ಪರಿಶೀಲನೆಗೆ ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯನ್ನು ನಿಯೋಜನೆ ಮಾಡಲಾಗಿತ್ತು.
20/9/2024 ರಂದು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ಮಾಡಿರುತ್ತಾರೆ.
ಆದರೆ ಸರ್ಕಾರದಿಂದ ಬಂದಿದ್ದ 134 ಪ್ರಶ್ನೆಗಳಿಗೆ ಸುಮಾರು 500 ಅಂಕಗಳು ಇರುತ್ತವೆ.
ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯವರು ಕೇವಲ 10 ರಿಂದ15 ನಿಮಿಷದಲ್ಲಿ ಪರಿಶೀಲನೆ ಮಾಡಿದ್ದಾರೆ.
ಜಯಪುರ ಗ್ರಾಮ ಪಂಚಾಯತಿ ಯಲ್ಲಿ ದಾಖಲೆಗಳು ಸರಿಯಾಗಿ ಇದ್ದರು ಅವರು ಸರಿಯಾಗಿ ಪರಿಶೀಲನೆ ಮಾಡದೆ ಕಾಟಚಾರಕ್ಕೆ ಪರಿಶೀಲನೆ ಮಾಡಿ ಹೋಗಿ ಜಯಪುರ ಗ್ರಾಮ ಪಂಚಾಯಿತಿಗೆ ಸಿಗಬೇಕಿದ್ದ ಗಾಂಧಿ ಗ್ರಾಮ ಪುರಸ್ಕಾರವನ್ನು ತಪ್ಪಿಸಿದ್ದಾರೆ ಎಂದು ಜಯಪುರ ಗ್ರಾಮ ಪಂಚಾಯತಿ ಅವರು ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೇಲೆ ಅಕ್ರೋಶ ಹೊರಹಾಕಿದ್ದಾರೆ.

ಪರಿಶೀಲನೆ ಮಾಡಿ ನಮಗೆ ಮೊದಲು 401 ಅಂಕಗಳನ್ನು ನೀಡಿ ನಮ್ಮನ್ನು ಆಯ್ಕೆ ಮಾಡಿದ್ದರು.
ಈಗ ಮತ್ತೆ 328 ಅಂಕಗಳನ್ನು ನೀಡಿ ಸುಮಾರು 73 ಅಂಕಗಳನ್ನು ಕಡಿಮೆ ಮಾಡಿ ನಮಗೆ ಪ್ರಶಸ್ತಿಯನ್ನು ತಪ್ಪಿಸಿದ್ದಾರೆ.
ನಮಗೆ 401 ಅಂಕಗಳು ಮೊದಲು ಕೊಟ್ಟು ಈಗ 73 ಅಂಕ ಕಡಿಮೆ ಮಾಡಿ 328 ಅಂಕ ಮಾಡಿದ್ಯಾಕೆ?.ನಮಗೆ 73 ಅಂಕಗಳು ಕಡಿಮೆ ಹೇಗೆ ಆಯ್ತು?.ನಮಗೆ ಮಾಹಿತಿ ನೀಡಬೇಕು ಎಂಬುದು ಜಯಪುರ ಗ್ರಾಮ ಪಂಚಾಯತಿ ಅವರ ಬೇಡಿಕೆ.

ಇತ್ತೀಚಿನ ಸುದ್ದಿ

ಜಾಹೀರಾತು