2:10 AM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಜಯಪುರ: ಮೇಗುಂದ ಹೋಬಳಿಯಲ್ಲಿ ಮಳೆಯ ಅಬ್ಬರ: ಮರ ಬಿದ್ದು 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಹಿ

26/07/2025, 22:38

ಶಶಿ ಬೆತ್ತದಕೊಳಲು ಜಯಪುರ ಚಿಕ್ಕಮಗಳೂರು

info.reporterkarnataka@gmail.com

ಜಯಪುರ ಸಮೀಪದ ಮೇಗುಂದ ಹೋಬಳಿಯಲ್ಲಿ ಭಾರೀ ಮಳೆ ಗಾಳಿಗೆ ಹಲವೆಡೆ ಬೃಹತ್ತಾಕಾರದ ಮರಗಳು ವಿದ್ಯುತ್ ತಂತಿಯ ಮೇಲೆ ಬಿದ್ದು ಸುಮಾರು 50ಕ್ಕೂ ಹೆಚ್ಚು ಕಂಬಗಳು ಮುರಿದು ಬಿದ್ದಿದ್ದು ಎರಡು ದಿನದಿಂದ ಕರೆಂಟ್ ಇಲ್ಲದಂತಾಗಿದೆ.
ಮಳೆಯ ಅಬ್ಬರದ ನಡುವೆಯೂ ಸರಿಪಡಿಸುತ್ತಿದ್ದು ಒಂದೆಡೆ ಸರಿಯಾದರೆ ಮತ್ತೊಂದೆಡೆ ಮರ ವಿದ್ಯುತ್ ತಂತಿಗಳ ಮೇಲೆ ಬೀಳುತ್ತಿರುವುದರಿಂದ ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸಲು ಕಷ್ಟವಾಗುತ್ತಿದೆ.


ಭಾರೀ ಮಳೆ ಗಾಳಿಗೆ ವಿದ್ಯುತ್ ತಂತಿಗಳ ಮೇಲೆ ಮರಗಳು ಬೀಳುತ್ತಿದ್ದು ಇದನ್ನು ಪುನಃ ಸ್ಥಾಪಿಸಲು ಭಾರೀ ಮಳೆ ಗಾಳಿಯು ಅಡ್ಡಿಯಾಗುತ್ತಿದೆ.
ನಮ್ಮಲ್ಲಿ ಸಿಬ್ಬಂದಿಗಳು ಕೂಡ ಕಡಿಮೆ ಇದ್ದರೂ ಮಳೆ ಗಾಳಿ ಲೆಕ್ಕಿಸದೆ ಹರಸಾಹಸ ಪಟ್ಟು ಜಯಪುರದವರೆಗೂ ಸರಿಪಡಿಸಿದ್ದೇವೆ.
ಗ್ರಾಮೀಣ ಭಾಗಗಳಿಗೆ ಇಂದು ವಿದ್ಯುತ್ ಸಂಪರ್ಕಿಸುವುದು ಕಷ್ಟವಾಗಿದ್ದು ಗ್ರಾಹಕರು ಸಹಕರಿಸಬೇಕಾಗಿ ಕೋರಿಕೊಳ್ಳುತ್ತೇನೆ ಎಂದು
ಜಯಪುರ ಸಹಾಯಕ ಇಂಜಿನಿಯರ್ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು