3:14 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಜಯಪುರ: ಮೇಗುಂದ ಹೋಬಳಿಯಲ್ಲಿ ಮಳೆಯ ಅಬ್ಬರ: ಮರ ಬಿದ್ದು 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಹಿ

26/07/2025, 22:38

ಶಶಿ ಬೆತ್ತದಕೊಳಲು ಜಯಪುರ ಚಿಕ್ಕಮಗಳೂರು

info.reporterkarnataka@gmail.com

ಜಯಪುರ ಸಮೀಪದ ಮೇಗುಂದ ಹೋಬಳಿಯಲ್ಲಿ ಭಾರೀ ಮಳೆ ಗಾಳಿಗೆ ಹಲವೆಡೆ ಬೃಹತ್ತಾಕಾರದ ಮರಗಳು ವಿದ್ಯುತ್ ತಂತಿಯ ಮೇಲೆ ಬಿದ್ದು ಸುಮಾರು 50ಕ್ಕೂ ಹೆಚ್ಚು ಕಂಬಗಳು ಮುರಿದು ಬಿದ್ದಿದ್ದು ಎರಡು ದಿನದಿಂದ ಕರೆಂಟ್ ಇಲ್ಲದಂತಾಗಿದೆ.
ಮಳೆಯ ಅಬ್ಬರದ ನಡುವೆಯೂ ಸರಿಪಡಿಸುತ್ತಿದ್ದು ಒಂದೆಡೆ ಸರಿಯಾದರೆ ಮತ್ತೊಂದೆಡೆ ಮರ ವಿದ್ಯುತ್ ತಂತಿಗಳ ಮೇಲೆ ಬೀಳುತ್ತಿರುವುದರಿಂದ ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸಲು ಕಷ್ಟವಾಗುತ್ತಿದೆ.


ಭಾರೀ ಮಳೆ ಗಾಳಿಗೆ ವಿದ್ಯುತ್ ತಂತಿಗಳ ಮೇಲೆ ಮರಗಳು ಬೀಳುತ್ತಿದ್ದು ಇದನ್ನು ಪುನಃ ಸ್ಥಾಪಿಸಲು ಭಾರೀ ಮಳೆ ಗಾಳಿಯು ಅಡ್ಡಿಯಾಗುತ್ತಿದೆ.
ನಮ್ಮಲ್ಲಿ ಸಿಬ್ಬಂದಿಗಳು ಕೂಡ ಕಡಿಮೆ ಇದ್ದರೂ ಮಳೆ ಗಾಳಿ ಲೆಕ್ಕಿಸದೆ ಹರಸಾಹಸ ಪಟ್ಟು ಜಯಪುರದವರೆಗೂ ಸರಿಪಡಿಸಿದ್ದೇವೆ.
ಗ್ರಾಮೀಣ ಭಾಗಗಳಿಗೆ ಇಂದು ವಿದ್ಯುತ್ ಸಂಪರ್ಕಿಸುವುದು ಕಷ್ಟವಾಗಿದ್ದು ಗ್ರಾಹಕರು ಸಹಕರಿಸಬೇಕಾಗಿ ಕೋರಿಕೊಳ್ಳುತ್ತೇನೆ ಎಂದು
ಜಯಪುರ ಸಹಾಯಕ ಇಂಜಿನಿಯರ್ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು