2:01 AM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಜಯಪುರ: 20ಕ್ಕೂ ಹೆಚ್ಚು ಮಂದಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; 13 ಮಂದಿ ಆಸ್ಪತ್ರೆಗೆ

10/02/2025, 13:09

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಜಯಪುರ ಸಮೀಪದ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ತೀರ್ಥಕೆರೆ ಬಳಿ ಸಾತುಕುಡಿಗೆ ಎಸ್ಟೇಟಿಗೆ ಸೇರಿದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸುಮಾರು 13 ಮಂದಿ ಗಾಯಗೊಂಡಿದ್ದಾರೆ.
ಟ್ರ್ಯಾಕ್ಟರ್ ನಲ್ಲಿ ಜಯಪುರದಿಂದ ಸಾತುಕುಡಿಗೆ ಎಸ್ಟೇಟ್ ಗೆ ಜನರನ್ನು ಕರೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ಸುಮಾರು ಹದಿಮೂರು ಜನರಿಗೆ ಗಾಯಗಳಾಗಿದ್ದು ಜಯಪುರದ ಆಸ್ಪತ್ರೆಗೆ ಸೇರಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಹಾಗೂ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂಬ ಮಾಹಿತಿಯಿದೆ.
ಟ್ರ್ಯಾಕ್ಟರ್ ನಲ್ಲಿ 20ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ.
ಜಯಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು