8:00 AM Thursday19 - February 2026
ಬ್ರೇಕಿಂಗ್ ನ್ಯೂಸ್
ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್

ಇತ್ತೀಚಿನ ಸುದ್ದಿ

ಜಯಪುರ: 20ಕ್ಕೂ ಹೆಚ್ಚು ಮಂದಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; 13 ಮಂದಿ ಆಸ್ಪತ್ರೆಗೆ

10/02/2025, 13:09

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಜಯಪುರ ಸಮೀಪದ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ತೀರ್ಥಕೆರೆ ಬಳಿ ಸಾತುಕುಡಿಗೆ ಎಸ್ಟೇಟಿಗೆ ಸೇರಿದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸುಮಾರು 13 ಮಂದಿ ಗಾಯಗೊಂಡಿದ್ದಾರೆ.
ಟ್ರ್ಯಾಕ್ಟರ್ ನಲ್ಲಿ ಜಯಪುರದಿಂದ ಸಾತುಕುಡಿಗೆ ಎಸ್ಟೇಟ್ ಗೆ ಜನರನ್ನು ಕರೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ಸುಮಾರು ಹದಿಮೂರು ಜನರಿಗೆ ಗಾಯಗಳಾಗಿದ್ದು ಜಯಪುರದ ಆಸ್ಪತ್ರೆಗೆ ಸೇರಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಹಾಗೂ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂಬ ಮಾಹಿತಿಯಿದೆ.
ಟ್ರ್ಯಾಕ್ಟರ್ ನಲ್ಲಿ 20ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ.
ಜಯಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು