10:26 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ಜಯಶ್ರಿ ಕೊರಳಿಗೆ ಎಸ್ಸೆಸ್ಸೆಲ್ಸಿ ವಿಜಯ ಮಾಲೆ: 44ನೇ ವಯಸ್ಸಿನಲ್ಲಿ ಮಂಗಳೂರು ವಿವಿ ಕಾಲೇಜು ಅಟೆಂಡರ್ ಪಾಸ್ !

09/08/2021, 21:16

ಅನುಷ್ ಪಂಡಿತ್ ಮಂಗಳೂರು
info.reporterkarnata@gmail.com

ಕಲಿಯಬೇಕು ಎನ್ನುವ ಛಲ ಇದ್ದರೆ ವಯಸ್ಸು ಅಡ್ಡಿ ಬರೋದಿಲ್ಲ ಎನ್ನುವುದಕ್ಕೆ ತಾಜ ನಿದರ್ಶನ ಮಂಗಳೂರು ಯುನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಟೆಂಪರರಿ ಅಟೆಂಡರ್ ಜಯಶ್ರೀ ಅವರು.

ಹೌದು, ಕಲಿಯಬೇಕು ಎನ್ನುವ ಮನಸ್ಸಿದ್ದರೆ ವಯಸ್ಸಿನ ಮಾತಿಲ್ಲ ಎನ್ನುವಂತೆ ತನ್ನ 44 ವಯಸ್ಸಿನ ಕೆಲಸದ ಜತೆಗೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಿರ್ಣರಾಗಿದ್ದಾರೆ. ಮೂಲತ ವೆಲೆನ್ಸಿಯ ಸೂಟರ್ ಪೇಟೆಯಲ್ಲಿ ತನ್ನ ಪತಿ ಪ್ರದೀಪ್ ಅವರೊಂದಿಗೆ  ವಾಸಿಸುತ್ತಿದ್ದಾರೆ. ಪತಿ ಬ್ಯಾಂಕ್ ನಲ್ಲಿ ವಾಚ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜಯಶ್ರೀ ಅವರು 5ನೇ ತರಗತಿ ವರೆಗೆ ಕಲಿತಿದ್ದಾರೆ.10ನೇ ತರಗತಿಗೆ ನೇರವಾಗಿ ಪರೀಕ್ಷೆ ಬರೆದಿದ್ದಾರೆ. ಖಾಸಗಿ ಟ್ಯೂಶನ್ ಕ್ಲಾಸ್ ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಾರೆ.

ಬಾಲ್ಯದಲ್ಲಿ ಕಿತ್ತು ತಿನ್ನುವ ಬಡತನದಲ್ಲೇ ಬೆಳೆದ ಇವರು ಮಂಗಳೂರಿನ ಪದಂಗಡಿಯ ಗಂಧಕಾಡ್ ಪರಿಸರದಲ್ಲಿ ದಿವಂಗತ ಸೀತಾರಾಮ ಹಾಗೂ ಜಾನಕಿ (75) ಅವರಿಗೆ 4 ಹೆಣ್ಣು ಹಾಗೂ1 ಗಂಡು ಮಕ್ಕಳು. ಮೂವರು ಅಕ್ಕಂದಿರ ನಂತರದವರೇ ಜಯಶ್ರೀ.

ಜಯಶ್ರೀ ಅವರೆ ಹೇಳುವ ಪ್ರಕಾರ ಯೂನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶೋಭಾ ಮೇಡಂ ಹಾಗೂ ಉದಯ ಕುಮಾರ್ ಇರ್ವತ್ತೂರು ಅವರೆ ಕಲಿಯಲು ದಾರಿ ತೋರಿಸಿದವರು. ಕಲಿಯುವ ವಯಸ್ಸಲ್ಲಿ ಕಲಿಯಲು ಮನಸಿದ್ದರೂ ಪ್ರೇರೇಪಣೆ ನೀಡುವರಾರಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ನನಗೆ ಪರ್ಮನೆಂಟ್ ಆದರೆ ಸಂತೋಷ ಜೀವನಕ್ಕೆ ದಾರಿಯಾಗುತ್ತದೆ ಎನ್ನುವ ಆಶಯ. ಈಗಿನ ಮಕ್ಕಳಿಗೆ ನಾನು ಹೇಳುವುದೊಂದೇ ಅವಕಾಶ ಸಿಕ್ಕಾಗ ಕಲಿಯಿರಿ ಮತ್ತೆ ಪರಿತಪಿಸ ಬೇಡಿ. ಕಳೆದು ಹೋದ ಸಮಯ ಮತ್ತೆ ಬಾರದು

ಜಯಶ್ರೀ, ಅಟೆಂಡರ್, ಮಂಗಳೂರು ವಿವಿ ಕಾಲೇಜು

ಇತ್ತೀಚಿನ ಸುದ್ದಿ

ಜಾಹೀರಾತು