9:37 AM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಜಯಶ್ರಿ ಕೊರಳಿಗೆ ಎಸ್ಸೆಸ್ಸೆಲ್ಸಿ ವಿಜಯ ಮಾಲೆ: 44ನೇ ವಯಸ್ಸಿನಲ್ಲಿ ಮಂಗಳೂರು ವಿವಿ ಕಾಲೇಜು ಅಟೆಂಡರ್ ಪಾಸ್ !

09/08/2021, 21:16

ಅನುಷ್ ಪಂಡಿತ್ ಮಂಗಳೂರು
info.reporterkarnata@gmail.com

ಕಲಿಯಬೇಕು ಎನ್ನುವ ಛಲ ಇದ್ದರೆ ವಯಸ್ಸು ಅಡ್ಡಿ ಬರೋದಿಲ್ಲ ಎನ್ನುವುದಕ್ಕೆ ತಾಜ ನಿದರ್ಶನ ಮಂಗಳೂರು ಯುನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಟೆಂಪರರಿ ಅಟೆಂಡರ್ ಜಯಶ್ರೀ ಅವರು.

ಹೌದು, ಕಲಿಯಬೇಕು ಎನ್ನುವ ಮನಸ್ಸಿದ್ದರೆ ವಯಸ್ಸಿನ ಮಾತಿಲ್ಲ ಎನ್ನುವಂತೆ ತನ್ನ 44 ವಯಸ್ಸಿನ ಕೆಲಸದ ಜತೆಗೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಿರ್ಣರಾಗಿದ್ದಾರೆ. ಮೂಲತ ವೆಲೆನ್ಸಿಯ ಸೂಟರ್ ಪೇಟೆಯಲ್ಲಿ ತನ್ನ ಪತಿ ಪ್ರದೀಪ್ ಅವರೊಂದಿಗೆ  ವಾಸಿಸುತ್ತಿದ್ದಾರೆ. ಪತಿ ಬ್ಯಾಂಕ್ ನಲ್ಲಿ ವಾಚ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜಯಶ್ರೀ ಅವರು 5ನೇ ತರಗತಿ ವರೆಗೆ ಕಲಿತಿದ್ದಾರೆ.10ನೇ ತರಗತಿಗೆ ನೇರವಾಗಿ ಪರೀಕ್ಷೆ ಬರೆದಿದ್ದಾರೆ. ಖಾಸಗಿ ಟ್ಯೂಶನ್ ಕ್ಲಾಸ್ ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಾರೆ.

ಬಾಲ್ಯದಲ್ಲಿ ಕಿತ್ತು ತಿನ್ನುವ ಬಡತನದಲ್ಲೇ ಬೆಳೆದ ಇವರು ಮಂಗಳೂರಿನ ಪದಂಗಡಿಯ ಗಂಧಕಾಡ್ ಪರಿಸರದಲ್ಲಿ ದಿವಂಗತ ಸೀತಾರಾಮ ಹಾಗೂ ಜಾನಕಿ (75) ಅವರಿಗೆ 4 ಹೆಣ್ಣು ಹಾಗೂ1 ಗಂಡು ಮಕ್ಕಳು. ಮೂವರು ಅಕ್ಕಂದಿರ ನಂತರದವರೇ ಜಯಶ್ರೀ.

ಜಯಶ್ರೀ ಅವರೆ ಹೇಳುವ ಪ್ರಕಾರ ಯೂನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶೋಭಾ ಮೇಡಂ ಹಾಗೂ ಉದಯ ಕುಮಾರ್ ಇರ್ವತ್ತೂರು ಅವರೆ ಕಲಿಯಲು ದಾರಿ ತೋರಿಸಿದವರು. ಕಲಿಯುವ ವಯಸ್ಸಲ್ಲಿ ಕಲಿಯಲು ಮನಸಿದ್ದರೂ ಪ್ರೇರೇಪಣೆ ನೀಡುವರಾರಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ನನಗೆ ಪರ್ಮನೆಂಟ್ ಆದರೆ ಸಂತೋಷ ಜೀವನಕ್ಕೆ ದಾರಿಯಾಗುತ್ತದೆ ಎನ್ನುವ ಆಶಯ. ಈಗಿನ ಮಕ್ಕಳಿಗೆ ನಾನು ಹೇಳುವುದೊಂದೇ ಅವಕಾಶ ಸಿಕ್ಕಾಗ ಕಲಿಯಿರಿ ಮತ್ತೆ ಪರಿತಪಿಸ ಬೇಡಿ. ಕಳೆದು ಹೋದ ಸಮಯ ಮತ್ತೆ ಬಾರದು

ಜಯಶ್ರೀ, ಅಟೆಂಡರ್, ಮಂಗಳೂರು ವಿವಿ ಕಾಲೇಜು

ಇತ್ತೀಚಿನ ಸುದ್ದಿ

ಜಾಹೀರಾತು