7:57 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಜಯಶ್ರಿ ಕೊರಳಿಗೆ ಎಸ್ಸೆಸ್ಸೆಲ್ಸಿ ವಿಜಯ ಮಾಲೆ: 44ನೇ ವಯಸ್ಸಿನಲ್ಲಿ ಮಂಗಳೂರು ವಿವಿ ಕಾಲೇಜು ಅಟೆಂಡರ್ ಪಾಸ್ !

09/08/2021, 21:16

ಅನುಷ್ ಪಂಡಿತ್ ಮಂಗಳೂರು
info.reporterkarnata@gmail.com

ಕಲಿಯಬೇಕು ಎನ್ನುವ ಛಲ ಇದ್ದರೆ ವಯಸ್ಸು ಅಡ್ಡಿ ಬರೋದಿಲ್ಲ ಎನ್ನುವುದಕ್ಕೆ ತಾಜ ನಿದರ್ಶನ ಮಂಗಳೂರು ಯುನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಟೆಂಪರರಿ ಅಟೆಂಡರ್ ಜಯಶ್ರೀ ಅವರು.

ಹೌದು, ಕಲಿಯಬೇಕು ಎನ್ನುವ ಮನಸ್ಸಿದ್ದರೆ ವಯಸ್ಸಿನ ಮಾತಿಲ್ಲ ಎನ್ನುವಂತೆ ತನ್ನ 44 ವಯಸ್ಸಿನ ಕೆಲಸದ ಜತೆಗೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಿರ್ಣರಾಗಿದ್ದಾರೆ. ಮೂಲತ ವೆಲೆನ್ಸಿಯ ಸೂಟರ್ ಪೇಟೆಯಲ್ಲಿ ತನ್ನ ಪತಿ ಪ್ರದೀಪ್ ಅವರೊಂದಿಗೆ  ವಾಸಿಸುತ್ತಿದ್ದಾರೆ. ಪತಿ ಬ್ಯಾಂಕ್ ನಲ್ಲಿ ವಾಚ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜಯಶ್ರೀ ಅವರು 5ನೇ ತರಗತಿ ವರೆಗೆ ಕಲಿತಿದ್ದಾರೆ.10ನೇ ತರಗತಿಗೆ ನೇರವಾಗಿ ಪರೀಕ್ಷೆ ಬರೆದಿದ್ದಾರೆ. ಖಾಸಗಿ ಟ್ಯೂಶನ್ ಕ್ಲಾಸ್ ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಾರೆ.

ಬಾಲ್ಯದಲ್ಲಿ ಕಿತ್ತು ತಿನ್ನುವ ಬಡತನದಲ್ಲೇ ಬೆಳೆದ ಇವರು ಮಂಗಳೂರಿನ ಪದಂಗಡಿಯ ಗಂಧಕಾಡ್ ಪರಿಸರದಲ್ಲಿ ದಿವಂಗತ ಸೀತಾರಾಮ ಹಾಗೂ ಜಾನಕಿ (75) ಅವರಿಗೆ 4 ಹೆಣ್ಣು ಹಾಗೂ1 ಗಂಡು ಮಕ್ಕಳು. ಮೂವರು ಅಕ್ಕಂದಿರ ನಂತರದವರೇ ಜಯಶ್ರೀ.

ಜಯಶ್ರೀ ಅವರೆ ಹೇಳುವ ಪ್ರಕಾರ ಯೂನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶೋಭಾ ಮೇಡಂ ಹಾಗೂ ಉದಯ ಕುಮಾರ್ ಇರ್ವತ್ತೂರು ಅವರೆ ಕಲಿಯಲು ದಾರಿ ತೋರಿಸಿದವರು. ಕಲಿಯುವ ವಯಸ್ಸಲ್ಲಿ ಕಲಿಯಲು ಮನಸಿದ್ದರೂ ಪ್ರೇರೇಪಣೆ ನೀಡುವರಾರಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ನನಗೆ ಪರ್ಮನೆಂಟ್ ಆದರೆ ಸಂತೋಷ ಜೀವನಕ್ಕೆ ದಾರಿಯಾಗುತ್ತದೆ ಎನ್ನುವ ಆಶಯ. ಈಗಿನ ಮಕ್ಕಳಿಗೆ ನಾನು ಹೇಳುವುದೊಂದೇ ಅವಕಾಶ ಸಿಕ್ಕಾಗ ಕಲಿಯಿರಿ ಮತ್ತೆ ಪರಿತಪಿಸ ಬೇಡಿ. ಕಳೆದು ಹೋದ ಸಮಯ ಮತ್ತೆ ಬಾರದು

ಜಯಶ್ರೀ, ಅಟೆಂಡರ್, ಮಂಗಳೂರು ವಿವಿ ಕಾಲೇಜು

ಇತ್ತೀಚಿನ ಸುದ್ದಿ

ಜಾಹೀರಾತು