8:29 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕ ಪದಗ್ರಹ: ಸುಬ್ರಹ್ಮಣ್ಯ ಕೆ. ನೂತನ ಅಧ್ಯಕ್ಷ

03/02/2022, 09:08

ಬಂಟ್ವಾಳ(reporterkarnataka.com): ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕದ ಪದಗ್ರಹಣ ಸಮಾರಂಭ ನಡೆಯಿತು. 

ಜೇಸಿ ಮಂಗಳೂರು ಇಂಪ್ಯಾಕ್ಟ್‌ ಪ್ರವರ್ತಿತ ಜೆಸಿಐ ಬಿ.ಸಿ. ರೋಡ್ ಪವರ್ ಸ್ಟಾರ್ ಗೆ ಸುಬ್ರಹ್ಮಣ್ಯ ಕೆ. ನೂತನ ಅಧ್ಯಕ್ಷರಾಗಿ, ಸುಧೀರ್ ಕುಮಾರ್ ಶೆಟ್ಟಿ ಕಾರ್ಯದರ್ಶಿಯಾಗಿ, ಮರೀಟಾ ಕ್ರಿಸ್ಟೀನ್ ಡಿ. ಜತೆ ಕಾರ್ಯದರ್ಶಿಯಾಗಿ,  ಸುಭಾಶ್  ರೈ ಖಜಾಂಚಿಯಾಗಿ ಅಧಿಕಾರ ಸ್ವೀಕರಿಸಿದರು.

ಉಪಾಧ್ಯಕ್ಷರಾಗಿ ಮಹೇಶ್ ಶೆಟ್ಟಿ, ಅಶ್ರಫ್ ಎಂ.ಬಿ, ಸತೀಶ್ ಸಂಪಾಜೆ, ಸುನಿಲ್ ಮುಡ್ಡಾಜೆ ರಾಯಿ, ಸುರೇಶ್ ಮರೋಳಿ, ಪ್ರಥಮ ಮಹಿಳೆಯಾಗಿ ಪುನೀತಾ ಎಸ್., ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ಕನಿಷ್ಕ್ ಎಸ್. ರೈ, ನಿರ್ದೇಶಕರು ಮತ್ತು ಘಟಕದ ವಿವಿಧ ಜವಾಬ್ದಾರಿಗಳನ್ನು ಅರ್ಜುನ್ ಆಳ್ವ, ಅನುಪಮಾ ಎಸ್. ಕಡಬ, ರವಿರಾಜ್ ಶೆಟ್ಟಿ ಪಾಲ್ತಾಜೆ, ಸುಹಾಸ್ ಕೆ. ಕಲ್ಲಡ್ಕ, ದೀಪಕ್ ರೈ ದೇರಳಕಟ್ಟೆ, ರೋಹಿತ್ ರಾಯಿ, ನಾಗರಾಜ್ ಶೆಟ್ಟಿ ಮೊಡಂಕಾಪು, ಶರತ್ ಕಲ್ಲಡ್ಕ, ವಿದ್ಯಾ ಎಸ್. ರೈ, ಭವ್ಯಾ ಸುಧೀರ್ ಶೆಟ್ಟಿ, ಬೇಬಿ ಸತೀಶ್ ಅವರಿಗೆ ನಿಯೋಜಿಸಲಾಯಿತು.

ಬಿ.ಸಿ.ರೋಡ್‌ನ ವಕೀಲ ಕಾರ್ತಿಕ್ ಎಂ . ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೈದ್ಯರಾದ ಡಾ.ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಪೂರ್ವ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಲಯ ಉಪಾಧ್ಯಕ್ಷ ದೀಪಕ್ ಗಂಗೂಲಿ ಗೌರವ ಅತಿಥಿಗಳಾಗಿದ್ದರು. ಜೆಸಿಐ ಮಂಗಳೂರು ಇಂಪ್ಯಾಕ್ಟ್ ಅಧ್ಯಕ್ಷರಾದ ಅನೀಶಾ ಗಂಗೂಲಿ, ಪ್ರಾಜೆಕ್ಟ್ ಡೈರೆಕ್ಟರ್ ಬಿ.ಡಿ.ದತ್ತಾತ್ತೇಯ, ಜೆಸಿಐ ಮಂಗಳೂರು ಇಂಪ್ಯಾಕ್ಟ್ ನಿಕಟಪೂರ್ವ ಅಧ್ಯಕ್ಷರಾದ ರವಿರಾಜ್ ಎ.ಪಿ. ಮತ್ತಿತರರು ಉಪಸ್ಥಿತರಿದ್ದರು. ರಾಷ್ಟ್ರೀಯ ತರಬೇತುದಾರ ಚೇತನಾ ದತ್ತಾತ್ರೇಯ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು