5:41 AM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕ ಪದಗ್ರಹ: ಸುಬ್ರಹ್ಮಣ್ಯ ಕೆ. ನೂತನ ಅಧ್ಯಕ್ಷ

03/02/2022, 09:08

ಬಂಟ್ವಾಳ(reporterkarnataka.com): ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕದ ಪದಗ್ರಹಣ ಸಮಾರಂಭ ನಡೆಯಿತು. 

ಜೇಸಿ ಮಂಗಳೂರು ಇಂಪ್ಯಾಕ್ಟ್‌ ಪ್ರವರ್ತಿತ ಜೆಸಿಐ ಬಿ.ಸಿ. ರೋಡ್ ಪವರ್ ಸ್ಟಾರ್ ಗೆ ಸುಬ್ರಹ್ಮಣ್ಯ ಕೆ. ನೂತನ ಅಧ್ಯಕ್ಷರಾಗಿ, ಸುಧೀರ್ ಕುಮಾರ್ ಶೆಟ್ಟಿ ಕಾರ್ಯದರ್ಶಿಯಾಗಿ, ಮರೀಟಾ ಕ್ರಿಸ್ಟೀನ್ ಡಿ. ಜತೆ ಕಾರ್ಯದರ್ಶಿಯಾಗಿ,  ಸುಭಾಶ್  ರೈ ಖಜಾಂಚಿಯಾಗಿ ಅಧಿಕಾರ ಸ್ವೀಕರಿಸಿದರು.

ಉಪಾಧ್ಯಕ್ಷರಾಗಿ ಮಹೇಶ್ ಶೆಟ್ಟಿ, ಅಶ್ರಫ್ ಎಂ.ಬಿ, ಸತೀಶ್ ಸಂಪಾಜೆ, ಸುನಿಲ್ ಮುಡ್ಡಾಜೆ ರಾಯಿ, ಸುರೇಶ್ ಮರೋಳಿ, ಪ್ರಥಮ ಮಹಿಳೆಯಾಗಿ ಪುನೀತಾ ಎಸ್., ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ಕನಿಷ್ಕ್ ಎಸ್. ರೈ, ನಿರ್ದೇಶಕರು ಮತ್ತು ಘಟಕದ ವಿವಿಧ ಜವಾಬ್ದಾರಿಗಳನ್ನು ಅರ್ಜುನ್ ಆಳ್ವ, ಅನುಪಮಾ ಎಸ್. ಕಡಬ, ರವಿರಾಜ್ ಶೆಟ್ಟಿ ಪಾಲ್ತಾಜೆ, ಸುಹಾಸ್ ಕೆ. ಕಲ್ಲಡ್ಕ, ದೀಪಕ್ ರೈ ದೇರಳಕಟ್ಟೆ, ರೋಹಿತ್ ರಾಯಿ, ನಾಗರಾಜ್ ಶೆಟ್ಟಿ ಮೊಡಂಕಾಪು, ಶರತ್ ಕಲ್ಲಡ್ಕ, ವಿದ್ಯಾ ಎಸ್. ರೈ, ಭವ್ಯಾ ಸುಧೀರ್ ಶೆಟ್ಟಿ, ಬೇಬಿ ಸತೀಶ್ ಅವರಿಗೆ ನಿಯೋಜಿಸಲಾಯಿತು.

ಬಿ.ಸಿ.ರೋಡ್‌ನ ವಕೀಲ ಕಾರ್ತಿಕ್ ಎಂ . ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೈದ್ಯರಾದ ಡಾ.ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಪೂರ್ವ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಲಯ ಉಪಾಧ್ಯಕ್ಷ ದೀಪಕ್ ಗಂಗೂಲಿ ಗೌರವ ಅತಿಥಿಗಳಾಗಿದ್ದರು. ಜೆಸಿಐ ಮಂಗಳೂರು ಇಂಪ್ಯಾಕ್ಟ್ ಅಧ್ಯಕ್ಷರಾದ ಅನೀಶಾ ಗಂಗೂಲಿ, ಪ್ರಾಜೆಕ್ಟ್ ಡೈರೆಕ್ಟರ್ ಬಿ.ಡಿ.ದತ್ತಾತ್ತೇಯ, ಜೆಸಿಐ ಮಂಗಳೂರು ಇಂಪ್ಯಾಕ್ಟ್ ನಿಕಟಪೂರ್ವ ಅಧ್ಯಕ್ಷರಾದ ರವಿರಾಜ್ ಎ.ಪಿ. ಮತ್ತಿತರರು ಉಪಸ್ಥಿತರಿದ್ದರು. ರಾಷ್ಟ್ರೀಯ ತರಬೇತುದಾರ ಚೇತನಾ ದತ್ತಾತ್ರೇಯ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು