11:39 PM Saturday31 - January 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಜೇಸಿಐ ಬಿ.ಸಿ.ರೋಡ್ ವತಿಯಿಂದ ಮಹಿಳಾ ದಿನಾಚರಣೆ: ಸಾಧಕಿಯರಿಬ್ಬರಿಗೆ ಸನ್ಮಾನ

10/03/2022, 19:11

ಬಂಟ್ವಾಳ(reporterkarnataka.com): ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ  ಜೇಸಿಐ ಬಿ.ಸಿ.ರೋಡ್ ಪವರ್ ಸ್ಟಾರ್” ವತಿಯಿಂದ ಮಹಿಳಾ ಸಾಧಕಿಯರಿಬ್ಬರನ್ನು ಸನ್ಮಾನಿಸಲಾಯಿತು.

ಗಾಂದೋಡಿನ ಅಂಗನವಾಡಿ ಕೇಂದ್ರದಲ್ಲಿ ಸುಮಾರು 30 ವರುಷದಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾಂಸ್ಕೃತಿಕ ಸಂಘಟಕಿ, ಸಾಮಾಜಿಕ‌ ಕಾರ್ಯಕರ್ತೆ ಸರೋಜಾ ಪ್ರಕಾಶ್ ಹಾಗೂ ಹೋಮಿಯೋಪತಿ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸೆ ವಿಷಯದಲ್ಲಿ  4ನೇ ಶ್ರೇಣಿ ಪಡೆದು ತೇರ್ಗಡೆ ಹೊಂದಿರುವ ಸಾಧಕಿ ಡಾ. ಪ್ರಣಮ್ಯ ಜೈನ್ ರಾಯಿ  ಅವರನ್ನು‌ ಸನ್ಮಾನಿಸಿ‌ ಅಭಿನಂದಿಸಲಾಯಿತು. 

ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಕಾಡುಮಠ ವಹಿಸಿದ್ದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಹೇಮಚಂದ್ರ ಶೆಟ್ಟಿಗಾರ್,ಜಗದೀಶ್ ಕೊಯಿಲ,ರಾಘವೇಂದ್ರ ರಾಯಿ, ಸತೀಶ್ ಕೊಯಿಲ,ರೀಟಾ ಮಾರಿಯಾ ಮೆನೇಜಸ್  ಉಪಸ್ಥಿತರಿದ್ದರು.   ಸರೋಜಾ ಪ್ರಕಾಶ್ ಅವರನ್ನು ಅಂಗನವಾಡಿ ಕೇಂದ್ರದಲ್ಲಿ ಹಾಗೂ ಡಾ. ಪ್ರಣಮ್ಯ ಜೈನ್ ರಾಯಿ ಅವರನ್ನು‌ ಅವರ ಸ್ವಗೃಹದಲ್ಲಿ ಅಭಿನಂದಿಸಲಾಯಿತು. ಭವಾನಿ ಶೆಟ್ಟಿ ,ಸುಭಾಶ್ ರೈ, ಸತೀಶ್ ಸಂಪಾಜೆ,ಮಹೇಶ್ ಶೆಟ್ಟಿ, ವಿದ್ಯಾ ಎಸ್. ರೈ ಉಪಸ್ಥಿತರಿದ್ದರು. ಆಶಾ ದಿನೇಶ್ ಶೆಟ್ಟಿ ಹಾಗೂ ಮರೀಟಾ ಕ್ರಿಸ್ಟಿನ್ ಡಿಸೋಜಾ ಸನ್ಮಾನಿತರ ಪರಿಚಯಿಸಿದರು. 

ಸುಧೀರ್ ಕುಮಾರ್ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು