10:59 PM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಜೇಸಿಐ ಬಿ.ಸಿ.ರೋಡ್ ವತಿಯಿಂದ ಮಹಿಳಾ ದಿನಾಚರಣೆ: ಸಾಧಕಿಯರಿಬ್ಬರಿಗೆ ಸನ್ಮಾನ

10/03/2022, 19:11

ಬಂಟ್ವಾಳ(reporterkarnataka.com): ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ  ಜೇಸಿಐ ಬಿ.ಸಿ.ರೋಡ್ ಪವರ್ ಸ್ಟಾರ್” ವತಿಯಿಂದ ಮಹಿಳಾ ಸಾಧಕಿಯರಿಬ್ಬರನ್ನು ಸನ್ಮಾನಿಸಲಾಯಿತು.

ಗಾಂದೋಡಿನ ಅಂಗನವಾಡಿ ಕೇಂದ್ರದಲ್ಲಿ ಸುಮಾರು 30 ವರುಷದಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾಂಸ್ಕೃತಿಕ ಸಂಘಟಕಿ, ಸಾಮಾಜಿಕ‌ ಕಾರ್ಯಕರ್ತೆ ಸರೋಜಾ ಪ್ರಕಾಶ್ ಹಾಗೂ ಹೋಮಿಯೋಪತಿ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸೆ ವಿಷಯದಲ್ಲಿ  4ನೇ ಶ್ರೇಣಿ ಪಡೆದು ತೇರ್ಗಡೆ ಹೊಂದಿರುವ ಸಾಧಕಿ ಡಾ. ಪ್ರಣಮ್ಯ ಜೈನ್ ರಾಯಿ  ಅವರನ್ನು‌ ಸನ್ಮಾನಿಸಿ‌ ಅಭಿನಂದಿಸಲಾಯಿತು. 

ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಕಾಡುಮಠ ವಹಿಸಿದ್ದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಹೇಮಚಂದ್ರ ಶೆಟ್ಟಿಗಾರ್,ಜಗದೀಶ್ ಕೊಯಿಲ,ರಾಘವೇಂದ್ರ ರಾಯಿ, ಸತೀಶ್ ಕೊಯಿಲ,ರೀಟಾ ಮಾರಿಯಾ ಮೆನೇಜಸ್  ಉಪಸ್ಥಿತರಿದ್ದರು.   ಸರೋಜಾ ಪ್ರಕಾಶ್ ಅವರನ್ನು ಅಂಗನವಾಡಿ ಕೇಂದ್ರದಲ್ಲಿ ಹಾಗೂ ಡಾ. ಪ್ರಣಮ್ಯ ಜೈನ್ ರಾಯಿ ಅವರನ್ನು‌ ಅವರ ಸ್ವಗೃಹದಲ್ಲಿ ಅಭಿನಂದಿಸಲಾಯಿತು. ಭವಾನಿ ಶೆಟ್ಟಿ ,ಸುಭಾಶ್ ರೈ, ಸತೀಶ್ ಸಂಪಾಜೆ,ಮಹೇಶ್ ಶೆಟ್ಟಿ, ವಿದ್ಯಾ ಎಸ್. ರೈ ಉಪಸ್ಥಿತರಿದ್ದರು. ಆಶಾ ದಿನೇಶ್ ಶೆಟ್ಟಿ ಹಾಗೂ ಮರೀಟಾ ಕ್ರಿಸ್ಟಿನ್ ಡಿಸೋಜಾ ಸನ್ಮಾನಿತರ ಪರಿಚಯಿಸಿದರು. 

ಸುಧೀರ್ ಕುಮಾರ್ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು