10:41 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಜೇಸಿಐ ಬಿ.ಸಿ.ರೋಡ್ ವತಿಯಿಂದ ಮಹಿಳಾ ದಿನಾಚರಣೆ: ಸಾಧಕಿಯರಿಬ್ಬರಿಗೆ ಸನ್ಮಾನ

10/03/2022, 19:11

ಬಂಟ್ವಾಳ(reporterkarnataka.com): ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ  ಜೇಸಿಐ ಬಿ.ಸಿ.ರೋಡ್ ಪವರ್ ಸ್ಟಾರ್” ವತಿಯಿಂದ ಮಹಿಳಾ ಸಾಧಕಿಯರಿಬ್ಬರನ್ನು ಸನ್ಮಾನಿಸಲಾಯಿತು.

ಗಾಂದೋಡಿನ ಅಂಗನವಾಡಿ ಕೇಂದ್ರದಲ್ಲಿ ಸುಮಾರು 30 ವರುಷದಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾಂಸ್ಕೃತಿಕ ಸಂಘಟಕಿ, ಸಾಮಾಜಿಕ‌ ಕಾರ್ಯಕರ್ತೆ ಸರೋಜಾ ಪ್ರಕಾಶ್ ಹಾಗೂ ಹೋಮಿಯೋಪತಿ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸೆ ವಿಷಯದಲ್ಲಿ  4ನೇ ಶ್ರೇಣಿ ಪಡೆದು ತೇರ್ಗಡೆ ಹೊಂದಿರುವ ಸಾಧಕಿ ಡಾ. ಪ್ರಣಮ್ಯ ಜೈನ್ ರಾಯಿ  ಅವರನ್ನು‌ ಸನ್ಮಾನಿಸಿ‌ ಅಭಿನಂದಿಸಲಾಯಿತು. 

ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಕಾಡುಮಠ ವಹಿಸಿದ್ದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಹೇಮಚಂದ್ರ ಶೆಟ್ಟಿಗಾರ್,ಜಗದೀಶ್ ಕೊಯಿಲ,ರಾಘವೇಂದ್ರ ರಾಯಿ, ಸತೀಶ್ ಕೊಯಿಲ,ರೀಟಾ ಮಾರಿಯಾ ಮೆನೇಜಸ್  ಉಪಸ್ಥಿತರಿದ್ದರು.   ಸರೋಜಾ ಪ್ರಕಾಶ್ ಅವರನ್ನು ಅಂಗನವಾಡಿ ಕೇಂದ್ರದಲ್ಲಿ ಹಾಗೂ ಡಾ. ಪ್ರಣಮ್ಯ ಜೈನ್ ರಾಯಿ ಅವರನ್ನು‌ ಅವರ ಸ್ವಗೃಹದಲ್ಲಿ ಅಭಿನಂದಿಸಲಾಯಿತು. ಭವಾನಿ ಶೆಟ್ಟಿ ,ಸುಭಾಶ್ ರೈ, ಸತೀಶ್ ಸಂಪಾಜೆ,ಮಹೇಶ್ ಶೆಟ್ಟಿ, ವಿದ್ಯಾ ಎಸ್. ರೈ ಉಪಸ್ಥಿತರಿದ್ದರು. ಆಶಾ ದಿನೇಶ್ ಶೆಟ್ಟಿ ಹಾಗೂ ಮರೀಟಾ ಕ್ರಿಸ್ಟಿನ್ ಡಿಸೋಜಾ ಸನ್ಮಾನಿತರ ಪರಿಚಯಿಸಿದರು. 

ಸುಧೀರ್ ಕುಮಾರ್ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು