8:27 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಜೇಸಿಐ ಬಿ.ಸಿ.ರೋಡ್ ವತಿಯಿಂದ ಮಹಿಳಾ ದಿನಾಚರಣೆ: ಸಾಧಕಿಯರಿಬ್ಬರಿಗೆ ಸನ್ಮಾನ

10/03/2022, 19:11

ಬಂಟ್ವಾಳ(reporterkarnataka.com): ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ  ಜೇಸಿಐ ಬಿ.ಸಿ.ರೋಡ್ ಪವರ್ ಸ್ಟಾರ್” ವತಿಯಿಂದ ಮಹಿಳಾ ಸಾಧಕಿಯರಿಬ್ಬರನ್ನು ಸನ್ಮಾನಿಸಲಾಯಿತು.

ಗಾಂದೋಡಿನ ಅಂಗನವಾಡಿ ಕೇಂದ್ರದಲ್ಲಿ ಸುಮಾರು 30 ವರುಷದಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾಂಸ್ಕೃತಿಕ ಸಂಘಟಕಿ, ಸಾಮಾಜಿಕ‌ ಕಾರ್ಯಕರ್ತೆ ಸರೋಜಾ ಪ್ರಕಾಶ್ ಹಾಗೂ ಹೋಮಿಯೋಪತಿ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸೆ ವಿಷಯದಲ್ಲಿ  4ನೇ ಶ್ರೇಣಿ ಪಡೆದು ತೇರ್ಗಡೆ ಹೊಂದಿರುವ ಸಾಧಕಿ ಡಾ. ಪ್ರಣಮ್ಯ ಜೈನ್ ರಾಯಿ  ಅವರನ್ನು‌ ಸನ್ಮಾನಿಸಿ‌ ಅಭಿನಂದಿಸಲಾಯಿತು. 

ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಕಾಡುಮಠ ವಹಿಸಿದ್ದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಹೇಮಚಂದ್ರ ಶೆಟ್ಟಿಗಾರ್,ಜಗದೀಶ್ ಕೊಯಿಲ,ರಾಘವೇಂದ್ರ ರಾಯಿ, ಸತೀಶ್ ಕೊಯಿಲ,ರೀಟಾ ಮಾರಿಯಾ ಮೆನೇಜಸ್  ಉಪಸ್ಥಿತರಿದ್ದರು.   ಸರೋಜಾ ಪ್ರಕಾಶ್ ಅವರನ್ನು ಅಂಗನವಾಡಿ ಕೇಂದ್ರದಲ್ಲಿ ಹಾಗೂ ಡಾ. ಪ್ರಣಮ್ಯ ಜೈನ್ ರಾಯಿ ಅವರನ್ನು‌ ಅವರ ಸ್ವಗೃಹದಲ್ಲಿ ಅಭಿನಂದಿಸಲಾಯಿತು. ಭವಾನಿ ಶೆಟ್ಟಿ ,ಸುಭಾಶ್ ರೈ, ಸತೀಶ್ ಸಂಪಾಜೆ,ಮಹೇಶ್ ಶೆಟ್ಟಿ, ವಿದ್ಯಾ ಎಸ್. ರೈ ಉಪಸ್ಥಿತರಿದ್ದರು. ಆಶಾ ದಿನೇಶ್ ಶೆಟ್ಟಿ ಹಾಗೂ ಮರೀಟಾ ಕ್ರಿಸ್ಟಿನ್ ಡಿಸೋಜಾ ಸನ್ಮಾನಿತರ ಪರಿಚಯಿಸಿದರು. 

ಸುಧೀರ್ ಕುಮಾರ್ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು