1:44 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಜೆಡಿಎಸ್- ಬಿಜೆಪಿ ಸಖ್ಯ: ಕೇಸರಿ ಪಾಳಯ ತೊರೆದು ದಳ ಸೇರಿದ್ದ ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ ಮತ್ತೆ ಪೇಚಿಗೆ; ಸೇರ್ತಾರಾ ಕಾಂಗ್ರೆಸ್ಸಿಗೆ?

01/10/2023, 11:50

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ತೊರೆದು ಜನತಾ ದಳ ಸೇರಿದ್ದ ಮೂಡಿಗೆರೆಯ ಮಾಜಿ ಶಾಸಕ ಕುಮಾರಸ್ವಾಮಿ ಮತ್ತೆ ಪೇಚಿಗೆ ಸಿಲುಕಿದ್ದಾರೆ. ಅವರು ಸೇರಿದ್ದ ಜಾತ್ಯತೀತ ಜನತಾ ದಳವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಜತೆ ಮೈತ್ರಿ ಮಾಡಿಸಿಕೊಂಡಿದ್ದಾರೆ.
ಮೂಡಿಗೆರೆ ಕುಮಾರಸ್ವಾಮಿ ಜನತಾ ದಳದಲ್ಲಿ ಉಳಿದರೆ ಮತ್ತೆ ಅವರು ಸಿ.ಟಿ. ರವಿ, ಶೋಭಾ ಕರಂದ್ಲಾಜೆ ಮುಂತಾದ ಬಿಜೆಪಿ ನಾಯಕರಿಗೆ ಮುಖಾಮುಖಿಯಾಗಬೇಕಾಗುತ್ತದೆ. ಬಿಜೆಪಿ ಸಂಗ ಬೇಡವೆಂದು ಜನತಾದಳ ಸೇರಿದ ಕುಮಾರಸ್ವಾಮಿ ಅವರಿಗೆ ‘ಹೋದೆಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ’ ಎನ್ನುವ ಸನ್ನಿವೇಶ ಎದುರಾಗಿದೆ.
ಕುಮಾರಸ್ವಾಮಿ ಅವರು ಬಿಜೆಪಿ ಶಾಸಕರಾಗಿರುವಾಗಲೇ ಬಿಜೆಪಿಯ ಒಂದು ಗುಂಪು ಅವರ ವಿರುದ್ದ ಹಲ್ಲು ಮಸೆಯುತ್ತಿತ್ತು. ಕುಮಾರಸ್ವಾಮಿ ಕಮುನಿಸ್ಟ್ ಎಂಬ ಪುಕಾರು ಎಬ್ಬಿಸಿದ್ದರು. ಹಲ್ಲೆ ಕೂಡ ನಡೆದಿತ್ತು. ಇಷ್ಟೆಲ್ಲ ನಡೆದ ಮೇಲೆ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಯಿತು. ಕಾಂಗ್ರೆಸ್ ಗೆ ಹೋಗೋಣ ಅಂದ್ರೆ ಅಲ್ಲಿ ನಯನಾ ಮೋಟಮ್ಮ ಅವರಿಗೆ ಟಿಕೆಟ್ ಫೈನಲ್ ಆಗಿತ್ತು. ನಂತರ ಉಳಿದಿರುವ ರಾಜಕೀಯ ಆಸರೆ ಎಂದರೆ ಜಾತ್ಯತೀತ ಜನತಾ ದಳ ಮಾತ್ರ. ಹಾಗೆ ಕುಮಾರಸ್ವಾಮಿ ಅವರು ಮತ್ತೊಬ್ಬ ಕುಮಾರಸ್ವಾಮಿಯ ಜನತಾ ದಳ ಬಸ್ಸನ್ನು ಏರಿಯೇ ಬಿಟ್ಟರು. ಈಗ ವಿಧಾನಸಭೆ ಚುನಾವಣೆ ಮುಗಿದು 4 ತಿಂಗಳು ಕಳೆದಿವೆ. ರಾಜಕೀಯ ಸ್ಥಿತ್ಯಂತರ ಮತ್ತೆ ರಾಜ್ಯದಲ್ಲಿ ಪ್ರಾರಂಭವಾಗಿದೆ. ಜನತಾ ದಳ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ವಿಧಾನಸಭೆ ಚುನಾವಣೆಯಲ್ಲಿ 40+ ಸೀಟುಗಳ ಕನಸು ಕಂಡಿದ್ದ ಜನತಾ ದಳಕ್ಕೆ ಸಿಕ್ಕಿದ್ದು ಬರೇ 19 ಸೀಟು. ಅದಲ್ಲದೆ ತಮ್ಮ ರಾಜಕೀಯ ವಿರೋಧಿ ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಇವೆಲ್ಲದರ ಫಲಶೃತಿ ಜನತಾ ದಳ ಮತ್ತು ಬಿಜೆಪಿಯ ಮೈತ್ರಿ ಆಗಿದೆ.
ಕುಮಾರಸ್ವಾಮಿ ಮತ್ತು ಜೆ.ಪಿ. ನಡ್ಡಾ ಅವರ ನಡುವೆ ಒಡಂಬಡಿಕೆ ಏನೋ ನಡೆದು ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ ಬಿಜೆಪಿ ಸಂಗ ಬೇಡವೆಂದು ಜನತಾ ದಳ ಸೇರಿದ ಮೂಡಿಗೆರೆಯ ಕುಮಾರಸ್ವಾಮಿ ಪಾಡೇನು? ಇವೆಲ್ಲದಕ್ಕೆ ಉತ್ತರ ಕಾಂಗ್ರೆಸ್ ಸೇರ್ಪಡೆ ಆಗಿದೆ. ಸದ್ಯದಲ್ಲೇ ಕುಮಾರಸ್ವಾಮಿ ಅವರು ಕೈ ಪಾಳಯ ಸೇರುವುದು ಬಹುತೇಕ ಗ್ಯಾರಂಟಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು