11:07 PM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಜೆಡಿಎಸ್- ಬಿಜೆಪಿ ಸಖ್ಯ: ಕೇಸರಿ ಪಾಳಯ ತೊರೆದು ದಳ ಸೇರಿದ್ದ ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ ಮತ್ತೆ ಪೇಚಿಗೆ; ಸೇರ್ತಾರಾ ಕಾಂಗ್ರೆಸ್ಸಿಗೆ?

01/10/2023, 11:50

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ತೊರೆದು ಜನತಾ ದಳ ಸೇರಿದ್ದ ಮೂಡಿಗೆರೆಯ ಮಾಜಿ ಶಾಸಕ ಕುಮಾರಸ್ವಾಮಿ ಮತ್ತೆ ಪೇಚಿಗೆ ಸಿಲುಕಿದ್ದಾರೆ. ಅವರು ಸೇರಿದ್ದ ಜಾತ್ಯತೀತ ಜನತಾ ದಳವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಜತೆ ಮೈತ್ರಿ ಮಾಡಿಸಿಕೊಂಡಿದ್ದಾರೆ.
ಮೂಡಿಗೆರೆ ಕುಮಾರಸ್ವಾಮಿ ಜನತಾ ದಳದಲ್ಲಿ ಉಳಿದರೆ ಮತ್ತೆ ಅವರು ಸಿ.ಟಿ. ರವಿ, ಶೋಭಾ ಕರಂದ್ಲಾಜೆ ಮುಂತಾದ ಬಿಜೆಪಿ ನಾಯಕರಿಗೆ ಮುಖಾಮುಖಿಯಾಗಬೇಕಾಗುತ್ತದೆ. ಬಿಜೆಪಿ ಸಂಗ ಬೇಡವೆಂದು ಜನತಾದಳ ಸೇರಿದ ಕುಮಾರಸ್ವಾಮಿ ಅವರಿಗೆ ‘ಹೋದೆಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ’ ಎನ್ನುವ ಸನ್ನಿವೇಶ ಎದುರಾಗಿದೆ.
ಕುಮಾರಸ್ವಾಮಿ ಅವರು ಬಿಜೆಪಿ ಶಾಸಕರಾಗಿರುವಾಗಲೇ ಬಿಜೆಪಿಯ ಒಂದು ಗುಂಪು ಅವರ ವಿರುದ್ದ ಹಲ್ಲು ಮಸೆಯುತ್ತಿತ್ತು. ಕುಮಾರಸ್ವಾಮಿ ಕಮುನಿಸ್ಟ್ ಎಂಬ ಪುಕಾರು ಎಬ್ಬಿಸಿದ್ದರು. ಹಲ್ಲೆ ಕೂಡ ನಡೆದಿತ್ತು. ಇಷ್ಟೆಲ್ಲ ನಡೆದ ಮೇಲೆ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಯಿತು. ಕಾಂಗ್ರೆಸ್ ಗೆ ಹೋಗೋಣ ಅಂದ್ರೆ ಅಲ್ಲಿ ನಯನಾ ಮೋಟಮ್ಮ ಅವರಿಗೆ ಟಿಕೆಟ್ ಫೈನಲ್ ಆಗಿತ್ತು. ನಂತರ ಉಳಿದಿರುವ ರಾಜಕೀಯ ಆಸರೆ ಎಂದರೆ ಜಾತ್ಯತೀತ ಜನತಾ ದಳ ಮಾತ್ರ. ಹಾಗೆ ಕುಮಾರಸ್ವಾಮಿ ಅವರು ಮತ್ತೊಬ್ಬ ಕುಮಾರಸ್ವಾಮಿಯ ಜನತಾ ದಳ ಬಸ್ಸನ್ನು ಏರಿಯೇ ಬಿಟ್ಟರು. ಈಗ ವಿಧಾನಸಭೆ ಚುನಾವಣೆ ಮುಗಿದು 4 ತಿಂಗಳು ಕಳೆದಿವೆ. ರಾಜಕೀಯ ಸ್ಥಿತ್ಯಂತರ ಮತ್ತೆ ರಾಜ್ಯದಲ್ಲಿ ಪ್ರಾರಂಭವಾಗಿದೆ. ಜನತಾ ದಳ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ವಿಧಾನಸಭೆ ಚುನಾವಣೆಯಲ್ಲಿ 40+ ಸೀಟುಗಳ ಕನಸು ಕಂಡಿದ್ದ ಜನತಾ ದಳಕ್ಕೆ ಸಿಕ್ಕಿದ್ದು ಬರೇ 19 ಸೀಟು. ಅದಲ್ಲದೆ ತಮ್ಮ ರಾಜಕೀಯ ವಿರೋಧಿ ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಇವೆಲ್ಲದರ ಫಲಶೃತಿ ಜನತಾ ದಳ ಮತ್ತು ಬಿಜೆಪಿಯ ಮೈತ್ರಿ ಆಗಿದೆ.
ಕುಮಾರಸ್ವಾಮಿ ಮತ್ತು ಜೆ.ಪಿ. ನಡ್ಡಾ ಅವರ ನಡುವೆ ಒಡಂಬಡಿಕೆ ಏನೋ ನಡೆದು ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ ಬಿಜೆಪಿ ಸಂಗ ಬೇಡವೆಂದು ಜನತಾ ದಳ ಸೇರಿದ ಮೂಡಿಗೆರೆಯ ಕುಮಾರಸ್ವಾಮಿ ಪಾಡೇನು? ಇವೆಲ್ಲದಕ್ಕೆ ಉತ್ತರ ಕಾಂಗ್ರೆಸ್ ಸೇರ್ಪಡೆ ಆಗಿದೆ. ಸದ್ಯದಲ್ಲೇ ಕುಮಾರಸ್ವಾಮಿ ಅವರು ಕೈ ಪಾಳಯ ಸೇರುವುದು ಬಹುತೇಕ ಗ್ಯಾರಂಟಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು