9:30 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಜೆಡಿಎಸ್- ಬಿಜೆಪಿ ಸಖ್ಯ: ಕೇಸರಿ ಪಾಳಯ ತೊರೆದು ದಳ ಸೇರಿದ್ದ ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ ಮತ್ತೆ ಪೇಚಿಗೆ; ಸೇರ್ತಾರಾ ಕಾಂಗ್ರೆಸ್ಸಿಗೆ?

01/10/2023, 11:50

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ತೊರೆದು ಜನತಾ ದಳ ಸೇರಿದ್ದ ಮೂಡಿಗೆರೆಯ ಮಾಜಿ ಶಾಸಕ ಕುಮಾರಸ್ವಾಮಿ ಮತ್ತೆ ಪೇಚಿಗೆ ಸಿಲುಕಿದ್ದಾರೆ. ಅವರು ಸೇರಿದ್ದ ಜಾತ್ಯತೀತ ಜನತಾ ದಳವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಜತೆ ಮೈತ್ರಿ ಮಾಡಿಸಿಕೊಂಡಿದ್ದಾರೆ.
ಮೂಡಿಗೆರೆ ಕುಮಾರಸ್ವಾಮಿ ಜನತಾ ದಳದಲ್ಲಿ ಉಳಿದರೆ ಮತ್ತೆ ಅವರು ಸಿ.ಟಿ. ರವಿ, ಶೋಭಾ ಕರಂದ್ಲಾಜೆ ಮುಂತಾದ ಬಿಜೆಪಿ ನಾಯಕರಿಗೆ ಮುಖಾಮುಖಿಯಾಗಬೇಕಾಗುತ್ತದೆ. ಬಿಜೆಪಿ ಸಂಗ ಬೇಡವೆಂದು ಜನತಾದಳ ಸೇರಿದ ಕುಮಾರಸ್ವಾಮಿ ಅವರಿಗೆ ‘ಹೋದೆಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ’ ಎನ್ನುವ ಸನ್ನಿವೇಶ ಎದುರಾಗಿದೆ.
ಕುಮಾರಸ್ವಾಮಿ ಅವರು ಬಿಜೆಪಿ ಶಾಸಕರಾಗಿರುವಾಗಲೇ ಬಿಜೆಪಿಯ ಒಂದು ಗುಂಪು ಅವರ ವಿರುದ್ದ ಹಲ್ಲು ಮಸೆಯುತ್ತಿತ್ತು. ಕುಮಾರಸ್ವಾಮಿ ಕಮುನಿಸ್ಟ್ ಎಂಬ ಪುಕಾರು ಎಬ್ಬಿಸಿದ್ದರು. ಹಲ್ಲೆ ಕೂಡ ನಡೆದಿತ್ತು. ಇಷ್ಟೆಲ್ಲ ನಡೆದ ಮೇಲೆ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಯಿತು. ಕಾಂಗ್ರೆಸ್ ಗೆ ಹೋಗೋಣ ಅಂದ್ರೆ ಅಲ್ಲಿ ನಯನಾ ಮೋಟಮ್ಮ ಅವರಿಗೆ ಟಿಕೆಟ್ ಫೈನಲ್ ಆಗಿತ್ತು. ನಂತರ ಉಳಿದಿರುವ ರಾಜಕೀಯ ಆಸರೆ ಎಂದರೆ ಜಾತ್ಯತೀತ ಜನತಾ ದಳ ಮಾತ್ರ. ಹಾಗೆ ಕುಮಾರಸ್ವಾಮಿ ಅವರು ಮತ್ತೊಬ್ಬ ಕುಮಾರಸ್ವಾಮಿಯ ಜನತಾ ದಳ ಬಸ್ಸನ್ನು ಏರಿಯೇ ಬಿಟ್ಟರು. ಈಗ ವಿಧಾನಸಭೆ ಚುನಾವಣೆ ಮುಗಿದು 4 ತಿಂಗಳು ಕಳೆದಿವೆ. ರಾಜಕೀಯ ಸ್ಥಿತ್ಯಂತರ ಮತ್ತೆ ರಾಜ್ಯದಲ್ಲಿ ಪ್ರಾರಂಭವಾಗಿದೆ. ಜನತಾ ದಳ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ವಿಧಾನಸಭೆ ಚುನಾವಣೆಯಲ್ಲಿ 40+ ಸೀಟುಗಳ ಕನಸು ಕಂಡಿದ್ದ ಜನತಾ ದಳಕ್ಕೆ ಸಿಕ್ಕಿದ್ದು ಬರೇ 19 ಸೀಟು. ಅದಲ್ಲದೆ ತಮ್ಮ ರಾಜಕೀಯ ವಿರೋಧಿ ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಇವೆಲ್ಲದರ ಫಲಶೃತಿ ಜನತಾ ದಳ ಮತ್ತು ಬಿಜೆಪಿಯ ಮೈತ್ರಿ ಆಗಿದೆ.
ಕುಮಾರಸ್ವಾಮಿ ಮತ್ತು ಜೆ.ಪಿ. ನಡ್ಡಾ ಅವರ ನಡುವೆ ಒಡಂಬಡಿಕೆ ಏನೋ ನಡೆದು ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ ಬಿಜೆಪಿ ಸಂಗ ಬೇಡವೆಂದು ಜನತಾ ದಳ ಸೇರಿದ ಮೂಡಿಗೆರೆಯ ಕುಮಾರಸ್ವಾಮಿ ಪಾಡೇನು? ಇವೆಲ್ಲದಕ್ಕೆ ಉತ್ತರ ಕಾಂಗ್ರೆಸ್ ಸೇರ್ಪಡೆ ಆಗಿದೆ. ಸದ್ಯದಲ್ಲೇ ಕುಮಾರಸ್ವಾಮಿ ಅವರು ಕೈ ಪಾಳಯ ಸೇರುವುದು ಬಹುತೇಕ ಗ್ಯಾರಂಟಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು