3:42 PM Monday29 - June 2026
ಬ್ರೇಕಿಂಗ್ ನ್ಯೂಸ್
ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್

ಇತ್ತೀಚಿನ ಸುದ್ದಿ

JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ

02/07/2025, 19:48

ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರ ಅತೀವ ಭ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ ಆರೋಪಿಸಿದೆ.


ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಂಗಳವಾರ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಕಾರ್ಯಕರ್ತರು, ಮುಖಂಡರು ಭಾಗವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ ಅವರು; ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರದ ಆಡಳಿತದಲ್ಲಿನ ಭ್ರಷ್ಟಾಚಾರ, ಲಂಚಗುಳಿತನ ಹಾಗೂ ಆಡಳಿತ ವೈಫಲ್ಯದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ದಿವಾಳಿಯಾಗಿದೆ ಎಂದು ಬೇಸರಗೊಂಡು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರುಗಳೇ ಟೀಕಾ ಪ್ರಹಾರ ಮಾಡುತ್ತಿದ್ದು, ಇದೇ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರ ಗಮನ ಸೆಳೆಯಲಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿಯಾಗಿದೆ ಎಂದು ಗಂಭೀರ ಆರೋಪ ಮಾಡಿದ ಅವರು; ಅನುದಾನವಿಲ್ಲದೆ ಶಾಸಕರು ಕ್ಷೇತ್ರಗಳ ಅಭಿವೃದ್ಧಿ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ. ಈ ಕಾರಣಕ್ಕೆ ಶಾಸಕರು ಬಂಡಾಯ ಎದ್ದಿದ್ದು, ಇದು ಸರ್ಕಾರದ ಅಧಃಪತನಕ್ಕೆ ಕಾರಣವಾಗಲಿದೆ. ಕಾಂಗ್ರೆಸ್ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು.
ಈ ಪ್ರತಿಭಟನೆಯಲ್ಲಿ ಶಾಸಕ ಟಿ.ಎನ್. ಜವರಾಯಿಗೌಡ ರವರು, ಮಾಜಿ ಶಾಸಕ ಕೆ.ಎ.ತಿಪ್ಪೇಸ್ವಾಮಿ, ಪಕ್ಷದ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಫ್ರೋಜ್ ಬೇಗ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಉತ್ತರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ಎ.ಎಂ.ಪ್ರವೀಣ್ ಕುಮಾರ್, ಕೇಂದ್ರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ನಾಗೇಶ್ವರ ರಾವ್, ಬೆಂಗಳೂರು ನಗರ ಕಾರ್ಯಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಮಹಾಪ್ರಧಾನ ಕಾರ್ಯದರ್ಶಿ ಎಸ್.ರಮೇಶ, ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ತಾರಾ ಲೋಕೇಶ್ ಹಾಗೂ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪಕ್ಷದ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು ಸೇರಿದಂತೆ ಅನೇಕ ಮುಖಂಡರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು