2:21 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಸ್ಥಾನದಿಂದ ಸಿ. ಎಂ. ಇಬ್ರಾಹಿಂ ಉಚ್ಚಾಟನೆ: ಎಚ್.ಡಿ. ಕುಮಾರಸ್ವಾಮಿ ನೇಮಕ

19/10/2023, 19:33

ಬೆಂಗಳೂರು(reporterkarnataka.com): ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಅವರನ್ನು ಉಚ್ಚಾಟಿಸಲಾಗಿದೆ. ಇದರೊಂದಿಗೆ ಜೆಡಿಎಸ್ ರಾಜ್ಯ ಸಮಿತಿಯನ್ನೂ ವಿಸರ್ಜಸಲಾಗಿದೆ.
ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್​ ಡಿ ದೇವೇಗೌಡ ಅವರು ಇಬ್ರಾಹಿಂ ಅವರನ್ನು ಅಧ್ಯಕ್ಷ ಸ್ಥಾನದ ಉಚ್ಚಾಟಿಸಿ ತನ್ನ ಪುತ್ರ ಎಚ್. ಡಿ. ಕುಮಾರಸ್ವಾಮಿ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
ಗುರುವಾರ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ರಾಜ್ಯ ಸಮಿತಿ ಸಭೆಯ ನಂತರ ದೇವೇಗೌಡ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು.
ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ. ಎಂ. ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ. ಪಕ್ಷದ ರಾಜ್ಯ ಕಾರ್ಯಕಾರಿಣಿ ಸಮಿತಿ ಕೂಡ ವಿಸರ್ಜಿಸಿ ಆದೇಶ ಹೊರಡಿಸಲಾಗಿದೆ ಎಂದರು.
ಶಾಸಕಾಂಗ ಪಕ್ಷದ ನಾಯಕ ಆಗಿರುವ ಎಚ್​ ಡಿ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿಸಲು ನಾವೆಲ್ಲ ಒಟ್ಟಾಗಿ ಸೇರಿ ಸರ್ವಾನುಮತದಿಂದ ತೀರ್ಮಾನಿಸಿದ್ದೇವೆ‌ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು