11:30 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಜೆಡಿಎಸ್ ಸಭೆಗೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರಿಗೆ ಆಹ್ವಾನ ಇಲ್ಲ: ಪಕ್ಷದೊಳಗೆ ಅಸಮಾಧಾನದ ಹೊಗೆ

22/02/2023, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೆಡಿಎಸ್ ಪಕ್ಷದ ಪಂಚರತ್ನ ಕಾರ್ಯಕ್ರಮದ ಅಂಗವಾಗಿ ಕೊಟ್ಟಿಗೆಹಾರದಲ್ಲಿ ನಡೆದ ಬಣಕಲ್ ಹೋಬಳಿ ಘಟಕದ ಸಭೆಗೆ ಸ್ಥಳೀಯ ಪಕ್ಷದ ಮುಖಂಡ ಹಾಗೂ ಕಾರ್ಯಕರ್ತರನ್ನು ಕರೆಯದೇ ಸಭೆ ನಡೆಸಿರುವುದರಿಂದ ಪಕ್ಷದ ಮುಖಂಡ ಹಾಗೂ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದೆ ಎಂದು ಜೆಡಿಎಸ್ ಮುಖಂಡ ತನು ಕೊಟ್ಟಿಗೆಹಾರ ತಿಳಿಸಿದ್ದಾರೆ.
ಕೊಟ್ಟಿಗೆಹಾರದಲ್ಲಿ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ತಿಳಿಸಿರುವ ಅವರು ‘ಜೆಡಿಎಸ್ ಪಕ್ಷಕ್ಕೆ ಹಲವು ವರ್ಷಗಳಿಂದ ಗುರುತಿಸಿಕೊಂಡು ಕಾರ್ಯ ನಿರ್ವಹಿಸುತ್ತಾ ಪಕ್ಷದ ಮೇಲೆ ಅಭಿಮಾನ ಇಟ್ಟು ಪಕ್ಷದ ಸಂಘಟನೆಗಾಗಿ ಶ್ರಮಿಸುತ್ತಿದ್ದೇವೆ.

ಆದರೆ ಮಾರ್ಚ್ 1 ರಂದು ಮೂಡಿಗೆರೆಯಲ್ಲಿ ನಡೆಯುವ ಪಂಚರತ್ನ ಕಾರ್ಯಕ್ರಮಕ್ಕೆ ಹೋಬಳಿ ಘಟಕದಿಂದ ಕೊಟ್ಟಿಗೆಹಾರದ ನಿಸರ್ಗ ಗ್ರ್ಯಾಂಡ್ ಹೊಟೇಲ್ ನಲ್ಲಿ ಮಂಗಳವಾರ ಮುಖಂಡರು ಸಭೆ ಏರ್ಪಡಿಸಿ ಸ್ಥಳೀಯ ಮುಖಂಡ ಹಾಗೂ ಕಾರ್ಯಕರ್ತರನ್ನು ಕರೆಯದೇ ಕಡೆಗಣಿಸಿರುವುದು ಮನಸ್ಸಿಗೆ ತುಂಬಾ ಬೇಸರ ತಂದಿದೆ. ಪಕ್ಷಕ್ಕೆ ಈಚೆಗೆ ಸೇರಿದವರನ್ನು ಕರೆದು ಹಿಂದಿನಿಂದಲೂ ಪಕ್ಷಕ್ಕೆ ದುಡಿದ ಸ್ಥಳೀಯ ಮುಖಂಡ ಹಾಗೂ ಕಾರ್ಯಕರ್ತರ ಕಡೆಗಣನೆ ಪಕ್ಷದಲ್ಲಿ ಅಸಮಾಧಾನ ತರಲು ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು