9:45 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಜೆಡಿಎಸ್ ಸಭೆಗೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರಿಗೆ ಆಹ್ವಾನ ಇಲ್ಲ: ಪಕ್ಷದೊಳಗೆ ಅಸಮಾಧಾನದ ಹೊಗೆ

22/02/2023, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೆಡಿಎಸ್ ಪಕ್ಷದ ಪಂಚರತ್ನ ಕಾರ್ಯಕ್ರಮದ ಅಂಗವಾಗಿ ಕೊಟ್ಟಿಗೆಹಾರದಲ್ಲಿ ನಡೆದ ಬಣಕಲ್ ಹೋಬಳಿ ಘಟಕದ ಸಭೆಗೆ ಸ್ಥಳೀಯ ಪಕ್ಷದ ಮುಖಂಡ ಹಾಗೂ ಕಾರ್ಯಕರ್ತರನ್ನು ಕರೆಯದೇ ಸಭೆ ನಡೆಸಿರುವುದರಿಂದ ಪಕ್ಷದ ಮುಖಂಡ ಹಾಗೂ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದೆ ಎಂದು ಜೆಡಿಎಸ್ ಮುಖಂಡ ತನು ಕೊಟ್ಟಿಗೆಹಾರ ತಿಳಿಸಿದ್ದಾರೆ.
ಕೊಟ್ಟಿಗೆಹಾರದಲ್ಲಿ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ತಿಳಿಸಿರುವ ಅವರು ‘ಜೆಡಿಎಸ್ ಪಕ್ಷಕ್ಕೆ ಹಲವು ವರ್ಷಗಳಿಂದ ಗುರುತಿಸಿಕೊಂಡು ಕಾರ್ಯ ನಿರ್ವಹಿಸುತ್ತಾ ಪಕ್ಷದ ಮೇಲೆ ಅಭಿಮಾನ ಇಟ್ಟು ಪಕ್ಷದ ಸಂಘಟನೆಗಾಗಿ ಶ್ರಮಿಸುತ್ತಿದ್ದೇವೆ.

ಆದರೆ ಮಾರ್ಚ್ 1 ರಂದು ಮೂಡಿಗೆರೆಯಲ್ಲಿ ನಡೆಯುವ ಪಂಚರತ್ನ ಕಾರ್ಯಕ್ರಮಕ್ಕೆ ಹೋಬಳಿ ಘಟಕದಿಂದ ಕೊಟ್ಟಿಗೆಹಾರದ ನಿಸರ್ಗ ಗ್ರ್ಯಾಂಡ್ ಹೊಟೇಲ್ ನಲ್ಲಿ ಮಂಗಳವಾರ ಮುಖಂಡರು ಸಭೆ ಏರ್ಪಡಿಸಿ ಸ್ಥಳೀಯ ಮುಖಂಡ ಹಾಗೂ ಕಾರ್ಯಕರ್ತರನ್ನು ಕರೆಯದೇ ಕಡೆಗಣಿಸಿರುವುದು ಮನಸ್ಸಿಗೆ ತುಂಬಾ ಬೇಸರ ತಂದಿದೆ. ಪಕ್ಷಕ್ಕೆ ಈಚೆಗೆ ಸೇರಿದವರನ್ನು ಕರೆದು ಹಿಂದಿನಿಂದಲೂ ಪಕ್ಷಕ್ಕೆ ದುಡಿದ ಸ್ಥಳೀಯ ಮುಖಂಡ ಹಾಗೂ ಕಾರ್ಯಕರ್ತರ ಕಡೆಗಣನೆ ಪಕ್ಷದಲ್ಲಿ ಅಸಮಾಧಾನ ತರಲು ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು