7:32 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ ಹೇಳಿಕೆಗೆ ಎಕ್ಸ್ ನಲ್ಲಿ ಕಾಳೆಲೆದ ಜೆಡಿಎಸ್

30/07/2025, 21:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂರು ವರ್ಷಗಳ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ ಎಂದು ಹೇಳಿರೋ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ವಿರುದ್ಧ ಜೆಡಿಎಸ್ ಟ್ವಿಟ್ ಮಾಡಿ ಕಾಂಗ್ರೆಸ್ ಕಾಲೆಳೆದಿದೆ.

ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರೇ ಸುಮ್ಮನೇ ಟೈಮ್ ವೇಸ್ಟ್ ಮಾಡಬೇಡಿ. ಕಾಂಗ್ರೆಸ್ ಶಾಸಕರಿಗೇ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಇಲ್ಲ. ಅದಕ್ಕೆ ಶಾಸಕಿ ನಯನಾ ಮೋಟಮ್ಮ ಅವರ ಮಾತುಗಳೇ ಸಾಕ್ಷಿ. ಹಾಗಾಗಿ, ಕಮಿಷನ್ ಮುಕ್ತ ಕರ್ನಾಟಕ, ಭಯ ಮುಕ್ತ ಸಶಕ್ತ ಹಾಗೂ ಸಮೃದ್ಧ ಕರ್ನಾಟಕ ನಿರ್ಮಿಸೋದ್ರ ಜೊತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಎನ್.ಡಿ.ಎ.ಮೈತ್ರಿ ಕೂಟ ಬೆಂಬಲಿಸಿ. 2028ರಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಮುನ್ನುಡಿ ಬರೆಯೋದು ಗ್ಯಾರಂಟಿ. ಅದಕ್ಕಾಗಿ, ಕಾಂಗ್ರೆಸ್ ಶಾಸಕರು-ಕಾರ್ಯಕರ್ತರೇ ಸಮಯ ವ್ಯರ್ಥ ಮಾಡಬೇಡಿ ಈಗಲೇ ಎಚ್ಚೆತ್ತುಕೊಳ್ಳಿ ಎಂದು ಎಕ್ಸ್ ನಲ್ಲಿ ನಯನಾ ಮೋಟಮ್ಮ ಹಾಗೂ ಕಾಂಗ್ರೆಸ್ ಕಾಲೆಳೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು