8:40 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಜೀವ ಜಗತ್ತಿನ ಬಗ್ಗೆ ಬೆರಗು ಮೂಡಿಸುವ ಏರೋಪ್ಲೇನ್ ಚಿಟ್ಟೆ ಕೃತಿ: ತೇಜಸ್ವಿ ಓದು ಕಾರ್ಯಕ್ರಮದಲ್ಲಿ ರಂಗಕರ್ಮಿ ಡಿ.ಎಂ.ಮಂಜುನಾಥಸ್ವಾಮಿ

12/07/2023, 21:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೀವ ಜಗತ್ತಿನ ಕ್ರಿಮಿ ಕೀಟಗಳ, ಪ್ರಾಣಿ ಪಕ್ಷಿಗಳ, ನೆಲ ಜಲದ, ಮರ ಗಿಡಗಳ ಮತ್ತು ಮಾನವ ಸಂಬಂಧಗಳ ಕುರಿತ ಕಥೆಗಳು ತೇಜಸ್ವಿ ಅವರ ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಕೃತಿಯಲ್ಲಿದ್ದು ಜೀವ ಜಗತ್ತಿನ ಬಗ್ಗೆ ಬೆರಗು ಮೂಡಿಸುತ್ತದೆ ಎಂದು ರಂಗಕರ್ಮಿ ಡಿ.ಎಂ.ಮಂಜುನಾಥಸ್ವಾಮಿ ಹೇಳಿದರು.
ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ನಡೆದ ತೇಜಸ್ವಿ ಓದು ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಕೃತಿಯ ಬಗ್ಗೆ ಉಪನ್ಯಾಸ ನೀಡಿ ಅವರು ಮಾತನಾಡಿದರು. ಪರಿಸರಕ್ಕೆ ಹತ್ತಿರವಾಗಿ ಮತ್ತು ಪೂರಕವಾಗಿ ಪ್ರಾಣಿ ಪಕ್ಷಿಗಳು ಬದುಕುತ್ತವೆ, ಆ ಪ್ರಾಣಿ ಪಕ್ಷಿಗಳು ಹೇಗೆ ಅಪಾಯದ ಅಂಚಿನಲ್ಲಿವೆ, ಆ ಪ್ರಾಣಿ ಪಕ್ಷಿಗಳ ರಕ್ಷಣೆಯ ಜವಾಬ್ದಾರಿ ನಮ್ಮೆಲರ ಮೇಲಿದೆ ಎಂಬುದನ್ನು ಈ ಕೃತಿಯಲ್ಲಿ ದಾಖಲಿಸಿದ್ದಾರೆ ಎಂದರು.
ಹಳ್ಳಿಯ ಕೊನೆ ಅಂಚಿನ ಜನರ ರೂಡಿಯ ಮಾತುಗಳನ್ನು ಕೂಡ ಸಂಶ್ಲೇಷಣೆ ಮಾಡಿ ಆ ಮಾತುಗಳಲ್ಲಿನ ಸತ್ಯವನ್ನು, ವೈಜ್ಞಾನಿಕವಾಗಿರುವ ಸಂಗತಿಗಳನ್ನು ಕಂಡು ಹಿಡಿಯುವಂತಹ ಕೆಲಸವನ್ನು ಮಾಡಿದ್ದಾರೆ. ಸಮಾಜದ ಕೊನೆಯಂಚಿನ ಜನರ ಬದುಕನ್ನು ತಮ್ಮ ಕೃತಿಗಳಲ್ಲಿ ಕಥೆಯಾಗಿಸಿದ್ದಾರೆ. ತೇಜಸ್ವಿ ಅವರ ಕೃತಿಗಳನ್ನು ಓದುವುದರಿಂದ ಪರಿಸರಕ್ಕೆ ಪೂರಕವಾಗಿ ಬದುಕಬೇಕು ಎಂಬ ಅರಿವು ನಮ್ಮಲ್ಲಿ ಮೂಡುತ್ತದೆ. ತೇಜಸ್ವಿ ಅವರು ಓದಿದ್ದು ಕನ್ನಡ ಸಾಹಿತ್ಯವಾಗಿದ್ದರೂ ಕೂಡ ಯಾವ ಜೀವ ವಿಜ್ಞಾನಿಗೂ ಕಡಿಮೆ ಇಲ್ಲದ ಕೆಲಸವನ್ನು ಮಾಡಿದವರು ಪೂರ್ಣಚಂದ್ರ ತೇಜಸ್ವಿ ಅವರು. ಯಾವತ್ತೂ ಅಳಿಸಿ ಹೋಗದಂತಹ ಪರಿಸರದ ಕೌತುಕಗಳನ್ನು ತಮ್ಮ ಕೃತಿಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ತೇಜಸ್ವಿ ಅವರ ಕೃತಿಗಳನ್ನು ಮಕ್ಕಳು, ವಿದ್ಯಾರ್ಥಿಗಳು ಓದುವಂತಾಗಬೇಕಿದೆ. ಆ ಮೂಲಕ ಪರಿಸರದ ಬಗ್ಗೆ ಬೆರಗು, ಕುತೂಹಲ, ಜಾಗೃತಿ ಮೂಡಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕರಾದ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು