10:25 PM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಜೀವಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಬಸ್ಸಿನ ಬಾಗಿಲಲ್ಲೇ ನೇತಾಡಿ ಪ್ರಯಾಣಿಸುವ ಹೆಣ್ಮಕ್ಕಳು; ಅಥಣಿ ಶಾಸಕರೇ ಏನು ಮಾಡುತ್ತಿದ್ದೀರಿ?

27/12/2022, 17:11

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಈ ದೃಶ್ಯ ನೋಡಿದ್ರೆ ಮೈ ಜುಮ್ ಅನ್ನುತ್ತೆ. ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಆಪಾಯ. ನಿಜಕ್ಕೂ ರಾಜ್ಯ ಸರ್ಕಾರವೇ ಮುಜುಗೂರ ಪಡುವಂತ ವಿಷಯ ಇದು.


ಇದೆಲ್ಲ ಕಂಡು ಬರುವುದು ಬೆಳಗಾವಿ ಜಿಲ್ಲೆಯ ಅಥಣಿ ಎಂಬ ಸಣ್ಣ ಪಟ್ಟಣದಲ್ಲಿ. ಇಲ್ಲಿ ಸರಕಾರಿ ಬಸ್ ಗಳ ಕೊರತೆಯಿಂದ ಸಾರ್ವಜನಿಕರ ಪಾಡು ಹೇಳಿ ತೀರದು. ಶಾಲಾ- ಕಾಲೇಜು ಮಕ್ಕಳು ಪಡುವ ಬವಣೆ ಯಾರಿಗೂ ಬೇಡ.

ಬಸ್ ರಶ್ ಆದಾಗ ಯುವಕರು ಬಾಗಿಲ ಮೆಟ್ಟಿಲಲ್ಲಿ ನಿಂತು ನೇತಾಡಿಕೊಂಡು ಹೋಗುವುದನ್ನು ಕಾಣುತ್ತೇವೆ. ಆದರೆ ಅಥಣಿಯಲ್ಲಿ ಹೆಣ್ಮಕ್ಕಳು ಕೂಡ ಬಾಗಿಲ ಮೆಟ್ಟಿಲಲ್ಲಿ ನಿಂತು ಪ್ರಯಾಣಿಸುವ ಪ್ರಮೇಯ ಒದಗಿ ಬಂದಿದೆ. ಇಲ್ಲಿನ ಶಾಸಕ ಮಹೇಶ್ ಕುಮಟಳ್ಳಿ ಏನು ಮಾಡುತ್ತಿದ್ದಾರೆ ಅಂತ ಮತದಾರರೀಗೆ ಅರ್ಥವಾಗುತ್ತಿಲ್ಲ. ಇಲ್ಲಿನ ಜವಾಬ್ದಾರಿ ಹೊಂದಿರುವ ಅವರು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕೆಎಸ್ಸಾರ್ಟಿಸಿ ಅಧಿಕಾರಿಗಳ ಜತೆ ಮಾತನಾಡಿ ಬಸ್ಸಿನ ವ್ಯವಸ್ಥೆ ಮಾಡಬೇಕು. ಆದರೆ ಸದಾ ಐಷಾರಾಮಿ ಕಾರಿನಲ್ಲಿ ತಿರುಗುವ ಶಾಸಕರಿಗೆ ಇದೆಲ್ಲ ಬೇಕಾಗಿಲ್ಲ.
ಮಕ್ಕಳು ಬಸ್ಸಿನಲ್ಲಿ ನೇತಾಡಿಕೊಂಡು ಹೋಗುವ ದೃಶ್ಯ ನೋಡಿದ್ರೆ ಯಾವನೇ ಪೋಷಕರು ತನ್ನ ಮಕ್ಕಳಿಗೆ ಶಿಕ್ಷಣವೇ ಬೇಡ ಅನ್ನೋ ತೀರ್ಮಾನಕ್ಕೆ ಬಂದರೆ ಅತಿಶಯೋಕ್ತಿಯಾಗಲಾರದು.


ಬಾಗಿಲಿಗೆ ಜೋತು ಬಿದ್ದು ಗ್ರಾಮೀಣ ವಿದ್ಯಾರ್ಥಿನಿ ಮನೆಗೆ ಹೋಗಲು ಹರಸಾಹಸ ಪಡುತ್ತಾರೆ. ಪ್ರಭಾವಿ ರಾಜಕಾರಣಿಗಳ ತವರಲ್ಲೇ ವಿದ್ಯಾರ್ಥಿಗಳ ಜೀವಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು