3:53 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಜೀವಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಬಸ್ಸಿನ ಬಾಗಿಲಲ್ಲೇ ನೇತಾಡಿ ಪ್ರಯಾಣಿಸುವ ಹೆಣ್ಮಕ್ಕಳು; ಅಥಣಿ ಶಾಸಕರೇ ಏನು ಮಾಡುತ್ತಿದ್ದೀರಿ?

27/12/2022, 17:11

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಈ ದೃಶ್ಯ ನೋಡಿದ್ರೆ ಮೈ ಜುಮ್ ಅನ್ನುತ್ತೆ. ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಆಪಾಯ. ನಿಜಕ್ಕೂ ರಾಜ್ಯ ಸರ್ಕಾರವೇ ಮುಜುಗೂರ ಪಡುವಂತ ವಿಷಯ ಇದು.


ಇದೆಲ್ಲ ಕಂಡು ಬರುವುದು ಬೆಳಗಾವಿ ಜಿಲ್ಲೆಯ ಅಥಣಿ ಎಂಬ ಸಣ್ಣ ಪಟ್ಟಣದಲ್ಲಿ. ಇಲ್ಲಿ ಸರಕಾರಿ ಬಸ್ ಗಳ ಕೊರತೆಯಿಂದ ಸಾರ್ವಜನಿಕರ ಪಾಡು ಹೇಳಿ ತೀರದು. ಶಾಲಾ- ಕಾಲೇಜು ಮಕ್ಕಳು ಪಡುವ ಬವಣೆ ಯಾರಿಗೂ ಬೇಡ.

ಬಸ್ ರಶ್ ಆದಾಗ ಯುವಕರು ಬಾಗಿಲ ಮೆಟ್ಟಿಲಲ್ಲಿ ನಿಂತು ನೇತಾಡಿಕೊಂಡು ಹೋಗುವುದನ್ನು ಕಾಣುತ್ತೇವೆ. ಆದರೆ ಅಥಣಿಯಲ್ಲಿ ಹೆಣ್ಮಕ್ಕಳು ಕೂಡ ಬಾಗಿಲ ಮೆಟ್ಟಿಲಲ್ಲಿ ನಿಂತು ಪ್ರಯಾಣಿಸುವ ಪ್ರಮೇಯ ಒದಗಿ ಬಂದಿದೆ. ಇಲ್ಲಿನ ಶಾಸಕ ಮಹೇಶ್ ಕುಮಟಳ್ಳಿ ಏನು ಮಾಡುತ್ತಿದ್ದಾರೆ ಅಂತ ಮತದಾರರೀಗೆ ಅರ್ಥವಾಗುತ್ತಿಲ್ಲ. ಇಲ್ಲಿನ ಜವಾಬ್ದಾರಿ ಹೊಂದಿರುವ ಅವರು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕೆಎಸ್ಸಾರ್ಟಿಸಿ ಅಧಿಕಾರಿಗಳ ಜತೆ ಮಾತನಾಡಿ ಬಸ್ಸಿನ ವ್ಯವಸ್ಥೆ ಮಾಡಬೇಕು. ಆದರೆ ಸದಾ ಐಷಾರಾಮಿ ಕಾರಿನಲ್ಲಿ ತಿರುಗುವ ಶಾಸಕರಿಗೆ ಇದೆಲ್ಲ ಬೇಕಾಗಿಲ್ಲ.
ಮಕ್ಕಳು ಬಸ್ಸಿನಲ್ಲಿ ನೇತಾಡಿಕೊಂಡು ಹೋಗುವ ದೃಶ್ಯ ನೋಡಿದ್ರೆ ಯಾವನೇ ಪೋಷಕರು ತನ್ನ ಮಕ್ಕಳಿಗೆ ಶಿಕ್ಷಣವೇ ಬೇಡ ಅನ್ನೋ ತೀರ್ಮಾನಕ್ಕೆ ಬಂದರೆ ಅತಿಶಯೋಕ್ತಿಯಾಗಲಾರದು.


ಬಾಗಿಲಿಗೆ ಜೋತು ಬಿದ್ದು ಗ್ರಾಮೀಣ ವಿದ್ಯಾರ್ಥಿನಿ ಮನೆಗೆ ಹೋಗಲು ಹರಸಾಹಸ ಪಡುತ್ತಾರೆ. ಪ್ರಭಾವಿ ರಾಜಕಾರಣಿಗಳ ತವರಲ್ಲೇ ವಿದ್ಯಾರ್ಥಿಗಳ ಜೀವಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು