9:37 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಜೀವಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಬಸ್ಸಿನ ಬಾಗಿಲಲ್ಲೇ ನೇತಾಡಿ ಪ್ರಯಾಣಿಸುವ ಹೆಣ್ಮಕ್ಕಳು; ಅಥಣಿ ಶಾಸಕರೇ ಏನು ಮಾಡುತ್ತಿದ್ದೀರಿ?

27/12/2022, 17:11

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಈ ದೃಶ್ಯ ನೋಡಿದ್ರೆ ಮೈ ಜುಮ್ ಅನ್ನುತ್ತೆ. ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಆಪಾಯ. ನಿಜಕ್ಕೂ ರಾಜ್ಯ ಸರ್ಕಾರವೇ ಮುಜುಗೂರ ಪಡುವಂತ ವಿಷಯ ಇದು.


ಇದೆಲ್ಲ ಕಂಡು ಬರುವುದು ಬೆಳಗಾವಿ ಜಿಲ್ಲೆಯ ಅಥಣಿ ಎಂಬ ಸಣ್ಣ ಪಟ್ಟಣದಲ್ಲಿ. ಇಲ್ಲಿ ಸರಕಾರಿ ಬಸ್ ಗಳ ಕೊರತೆಯಿಂದ ಸಾರ್ವಜನಿಕರ ಪಾಡು ಹೇಳಿ ತೀರದು. ಶಾಲಾ- ಕಾಲೇಜು ಮಕ್ಕಳು ಪಡುವ ಬವಣೆ ಯಾರಿಗೂ ಬೇಡ.

ಬಸ್ ರಶ್ ಆದಾಗ ಯುವಕರು ಬಾಗಿಲ ಮೆಟ್ಟಿಲಲ್ಲಿ ನಿಂತು ನೇತಾಡಿಕೊಂಡು ಹೋಗುವುದನ್ನು ಕಾಣುತ್ತೇವೆ. ಆದರೆ ಅಥಣಿಯಲ್ಲಿ ಹೆಣ್ಮಕ್ಕಳು ಕೂಡ ಬಾಗಿಲ ಮೆಟ್ಟಿಲಲ್ಲಿ ನಿಂತು ಪ್ರಯಾಣಿಸುವ ಪ್ರಮೇಯ ಒದಗಿ ಬಂದಿದೆ. ಇಲ್ಲಿನ ಶಾಸಕ ಮಹೇಶ್ ಕುಮಟಳ್ಳಿ ಏನು ಮಾಡುತ್ತಿದ್ದಾರೆ ಅಂತ ಮತದಾರರೀಗೆ ಅರ್ಥವಾಗುತ್ತಿಲ್ಲ. ಇಲ್ಲಿನ ಜವಾಬ್ದಾರಿ ಹೊಂದಿರುವ ಅವರು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕೆಎಸ್ಸಾರ್ಟಿಸಿ ಅಧಿಕಾರಿಗಳ ಜತೆ ಮಾತನಾಡಿ ಬಸ್ಸಿನ ವ್ಯವಸ್ಥೆ ಮಾಡಬೇಕು. ಆದರೆ ಸದಾ ಐಷಾರಾಮಿ ಕಾರಿನಲ್ಲಿ ತಿರುಗುವ ಶಾಸಕರಿಗೆ ಇದೆಲ್ಲ ಬೇಕಾಗಿಲ್ಲ.
ಮಕ್ಕಳು ಬಸ್ಸಿನಲ್ಲಿ ನೇತಾಡಿಕೊಂಡು ಹೋಗುವ ದೃಶ್ಯ ನೋಡಿದ್ರೆ ಯಾವನೇ ಪೋಷಕರು ತನ್ನ ಮಕ್ಕಳಿಗೆ ಶಿಕ್ಷಣವೇ ಬೇಡ ಅನ್ನೋ ತೀರ್ಮಾನಕ್ಕೆ ಬಂದರೆ ಅತಿಶಯೋಕ್ತಿಯಾಗಲಾರದು.


ಬಾಗಿಲಿಗೆ ಜೋತು ಬಿದ್ದು ಗ್ರಾಮೀಣ ವಿದ್ಯಾರ್ಥಿನಿ ಮನೆಗೆ ಹೋಗಲು ಹರಸಾಹಸ ಪಡುತ್ತಾರೆ. ಪ್ರಭಾವಿ ರಾಜಕಾರಣಿಗಳ ತವರಲ್ಲೇ ವಿದ್ಯಾರ್ಥಿಗಳ ಜೀವಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು