2:50 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಜೀವಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಬಸ್ಸಿನ ಬಾಗಿಲಲ್ಲೇ ನೇತಾಡಿ ಪ್ರಯಾಣಿಸುವ ಹೆಣ್ಮಕ್ಕಳು; ಅಥಣಿ ಶಾಸಕರೇ ಏನು ಮಾಡುತ್ತಿದ್ದೀರಿ?

27/12/2022, 17:11

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಈ ದೃಶ್ಯ ನೋಡಿದ್ರೆ ಮೈ ಜುಮ್ ಅನ್ನುತ್ತೆ. ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಆಪಾಯ. ನಿಜಕ್ಕೂ ರಾಜ್ಯ ಸರ್ಕಾರವೇ ಮುಜುಗೂರ ಪಡುವಂತ ವಿಷಯ ಇದು.


ಇದೆಲ್ಲ ಕಂಡು ಬರುವುದು ಬೆಳಗಾವಿ ಜಿಲ್ಲೆಯ ಅಥಣಿ ಎಂಬ ಸಣ್ಣ ಪಟ್ಟಣದಲ್ಲಿ. ಇಲ್ಲಿ ಸರಕಾರಿ ಬಸ್ ಗಳ ಕೊರತೆಯಿಂದ ಸಾರ್ವಜನಿಕರ ಪಾಡು ಹೇಳಿ ತೀರದು. ಶಾಲಾ- ಕಾಲೇಜು ಮಕ್ಕಳು ಪಡುವ ಬವಣೆ ಯಾರಿಗೂ ಬೇಡ.

ಬಸ್ ರಶ್ ಆದಾಗ ಯುವಕರು ಬಾಗಿಲ ಮೆಟ್ಟಿಲಲ್ಲಿ ನಿಂತು ನೇತಾಡಿಕೊಂಡು ಹೋಗುವುದನ್ನು ಕಾಣುತ್ತೇವೆ. ಆದರೆ ಅಥಣಿಯಲ್ಲಿ ಹೆಣ್ಮಕ್ಕಳು ಕೂಡ ಬಾಗಿಲ ಮೆಟ್ಟಿಲಲ್ಲಿ ನಿಂತು ಪ್ರಯಾಣಿಸುವ ಪ್ರಮೇಯ ಒದಗಿ ಬಂದಿದೆ. ಇಲ್ಲಿನ ಶಾಸಕ ಮಹೇಶ್ ಕುಮಟಳ್ಳಿ ಏನು ಮಾಡುತ್ತಿದ್ದಾರೆ ಅಂತ ಮತದಾರರೀಗೆ ಅರ್ಥವಾಗುತ್ತಿಲ್ಲ. ಇಲ್ಲಿನ ಜವಾಬ್ದಾರಿ ಹೊಂದಿರುವ ಅವರು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕೆಎಸ್ಸಾರ್ಟಿಸಿ ಅಧಿಕಾರಿಗಳ ಜತೆ ಮಾತನಾಡಿ ಬಸ್ಸಿನ ವ್ಯವಸ್ಥೆ ಮಾಡಬೇಕು. ಆದರೆ ಸದಾ ಐಷಾರಾಮಿ ಕಾರಿನಲ್ಲಿ ತಿರುಗುವ ಶಾಸಕರಿಗೆ ಇದೆಲ್ಲ ಬೇಕಾಗಿಲ್ಲ.
ಮಕ್ಕಳು ಬಸ್ಸಿನಲ್ಲಿ ನೇತಾಡಿಕೊಂಡು ಹೋಗುವ ದೃಶ್ಯ ನೋಡಿದ್ರೆ ಯಾವನೇ ಪೋಷಕರು ತನ್ನ ಮಕ್ಕಳಿಗೆ ಶಿಕ್ಷಣವೇ ಬೇಡ ಅನ್ನೋ ತೀರ್ಮಾನಕ್ಕೆ ಬಂದರೆ ಅತಿಶಯೋಕ್ತಿಯಾಗಲಾರದು.


ಬಾಗಿಲಿಗೆ ಜೋತು ಬಿದ್ದು ಗ್ರಾಮೀಣ ವಿದ್ಯಾರ್ಥಿನಿ ಮನೆಗೆ ಹೋಗಲು ಹರಸಾಹಸ ಪಡುತ್ತಾರೆ. ಪ್ರಭಾವಿ ರಾಜಕಾರಣಿಗಳ ತವರಲ್ಲೇ ವಿದ್ಯಾರ್ಥಿಗಳ ಜೀವಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು