6:12 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಜೆಪ್ಪು ಮಾರ್ಕೆಟ್ -ಬೋಳಾರ ಮಾರಿಗುಡಿ ರಸ್ತೆಯಲ್ಲೇ ವಾಹನಗಳ ಪಾರ್ಕಿಂಗ್: ಪಾದಚಾರಿಗಳ ಗೋಳು ಕೇಳುವವರಿಲ್ಲ: ಸ್ಥಳೀಯ ಕಾರ್ಪೋರೇಟರ್ ಏನು ಮಾಡುತ್ತಿದ್ದಾರೆ?

20/04/2024, 15:58

ಮಂಗಳೂರು(reporterkarnataka.com): ನಗರದ ಯಾವುದೇ ಮೂಲೆಗೆ ಹೋಗಿ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುವುದು ಸಾಮಾನ್ಯವಾಗಿ ಹೋಗಿದೆ. ಯಾರಿಗೆ ಏನೇ ತೊಂದರೆಯಾಗಲಿ, ತನ್ನ ವಾಹನ ಪಾರ್ಕಿಂಗ್ ಆದ್ರೆ ಸಾಕು ಎನ್ನುವ ಮನಸ್ಥಿತಿಯೇ ಇದಕ್ಕೆ ಕಾರಣ. ಇಂತಹ ಸಮಸ್ಯೆ ಜೆಪ್ಪು ಮಾರ್ಕೆಟ್- ಬೋಳಾರ ಮಾರಿಗುಡಿ ರಸ್ತೆಯಲ್ಲೂ ಜೀವಂತವಾಗಿದೆ.
ಜೆಪ್ಪು ಮಾರ್ಕೆಟ್ ನಿಂದ ಇತಿಹಾಸ ಪ್ರಸಿದ್ಧ ಬೋಳಾರ ಮಾರಿಗುಡಿ ದೇವಸ್ಥಾನದ ರಥ ಬೀದಿ ರಸ್ತೆ ವರೆಗೆ ವಾಹನಗಳನ್ನು ರಸ್ತೆಯಲ್ಲಿ ಮತ್ತು ಪಾದಚಾರಿಗಳು ನಡೆದಾಡುವ ಜಾಗದಲ್ಲಿ ಪಾರ್ಕಿಂಗ್ ಮಾಡುವುದು ಮಾಮೂಲಿಯಾಗಿದೆ. ಇದರಿಂದ ಪಾದಚಾರಿಗಳು
ಸಂಕಷ್ಟ ಎದುರಿಸುವಂತಾಗಿದೆ.
ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಮಂಗಳಾದೇವಿ ಮತ್ತು ಶ್ರೀ ಕ್ಷೇತ್ರ ಬೋಳಾರ ಮಾರಿಗುಡಿ ತೆರಳುವ ಬಸ್ಸುಗಳು ಸಂಚರಿಸುವ ಈ ರಸ್ತೆಯು ಜನನಿಬಿಡ ಪ್ರದೇಶವಾಗಿದೆ. ಎಳೆಯ ಮಕ್ಕಳು, ವಯೋ ವೃದ್ಧರು ಈ ಭಾಗದಲ್ಲಿ ತೆರಳುವುದು ಕಷ್ಟಕರವಾಗಿದೆ. ಘನ ವಾಹನಗಳು ಸಂಚರಿಸುವಾಗ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವ ದ್ವಿಚಕ್ರ ವಾಹನಗಳಿಂದ ಪಾದಚಾರಿಗಳಿಗೆ ನಡೆದಾಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಜೆಪ್ಪು ಮಾರ್ಕೆಟ್,ಮಹಾಲಸಾ ಕಂಪ್ಯೂಟರ್ ಕೇಂದ್ರ, ಪ್ರಧಾನ ಮಂತ್ರಿ ಜನೌಷಧಿ,ಬ್ಯಾಂಕುಗಳಿಗೆ ನಿತ್ಯ ದೈನಂದಿನ ತಮ್ಮ ವ್ಯವಹಾರಗಳಿಗೆ ತೆರಳುವವರಿಗೆ ಈ ಭಾಗದಲ್ಲಿ ನಡೆದಾಡುವುದು ದುಸ್ತರ ಎನಿಸಿದೆ.
ಆಯಾಯ ಕಟ್ಟಡಗಳಲ್ಲಿ ಪಾರ್ಕಿಂಗ್ ಮಾಡದೇ ಜನರು ನಡೆದಾಡುವ ಜಾಗದಲ್ಲಿ ಮತ್ತು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವವರಿಗೆ ಸಂಬಂಧ ಪಟ್ಟವರು ದಂಡ ವಿಧಿಸುವ ಅಗತ್ಯತೆ ಇದೆ. ಪ್ರಮುಖವಾಗಿ ಈ ಪ್ರದೇಶದ ಸ್ಥಳೀಯ ಜನಪ್ರತಿನಿಧಿಗಳು ಪಾದಚಾರಿಗಳಿಗೆ ನಡೆದಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಿ ಪಾದಚಾರಿಗಳಿಗೆ ಪ್ರಾಣಕ್ಕೆ ಸಂಕಷ್ಟ ಎದುರಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು