3:19 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಜೆಪ್ಪು ಮಾರ್ಕೆಟ್ -ಬೋಳಾರ ಮಾರಿಗುಡಿ ರಸ್ತೆಯಲ್ಲೇ ವಾಹನಗಳ ಪಾರ್ಕಿಂಗ್: ಪಾದಚಾರಿಗಳ ಗೋಳು ಕೇಳುವವರಿಲ್ಲ: ಸ್ಥಳೀಯ ಕಾರ್ಪೋರೇಟರ್ ಏನು ಮಾಡುತ್ತಿದ್ದಾರೆ?

20/04/2024, 15:58

ಮಂಗಳೂರು(reporterkarnataka.com): ನಗರದ ಯಾವುದೇ ಮೂಲೆಗೆ ಹೋಗಿ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುವುದು ಸಾಮಾನ್ಯವಾಗಿ ಹೋಗಿದೆ. ಯಾರಿಗೆ ಏನೇ ತೊಂದರೆಯಾಗಲಿ, ತನ್ನ ವಾಹನ ಪಾರ್ಕಿಂಗ್ ಆದ್ರೆ ಸಾಕು ಎನ್ನುವ ಮನಸ್ಥಿತಿಯೇ ಇದಕ್ಕೆ ಕಾರಣ. ಇಂತಹ ಸಮಸ್ಯೆ ಜೆಪ್ಪು ಮಾರ್ಕೆಟ್- ಬೋಳಾರ ಮಾರಿಗುಡಿ ರಸ್ತೆಯಲ್ಲೂ ಜೀವಂತವಾಗಿದೆ.
ಜೆಪ್ಪು ಮಾರ್ಕೆಟ್ ನಿಂದ ಇತಿಹಾಸ ಪ್ರಸಿದ್ಧ ಬೋಳಾರ ಮಾರಿಗುಡಿ ದೇವಸ್ಥಾನದ ರಥ ಬೀದಿ ರಸ್ತೆ ವರೆಗೆ ವಾಹನಗಳನ್ನು ರಸ್ತೆಯಲ್ಲಿ ಮತ್ತು ಪಾದಚಾರಿಗಳು ನಡೆದಾಡುವ ಜಾಗದಲ್ಲಿ ಪಾರ್ಕಿಂಗ್ ಮಾಡುವುದು ಮಾಮೂಲಿಯಾಗಿದೆ. ಇದರಿಂದ ಪಾದಚಾರಿಗಳು
ಸಂಕಷ್ಟ ಎದುರಿಸುವಂತಾಗಿದೆ.
ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಮಂಗಳಾದೇವಿ ಮತ್ತು ಶ್ರೀ ಕ್ಷೇತ್ರ ಬೋಳಾರ ಮಾರಿಗುಡಿ ತೆರಳುವ ಬಸ್ಸುಗಳು ಸಂಚರಿಸುವ ಈ ರಸ್ತೆಯು ಜನನಿಬಿಡ ಪ್ರದೇಶವಾಗಿದೆ. ಎಳೆಯ ಮಕ್ಕಳು, ವಯೋ ವೃದ್ಧರು ಈ ಭಾಗದಲ್ಲಿ ತೆರಳುವುದು ಕಷ್ಟಕರವಾಗಿದೆ. ಘನ ವಾಹನಗಳು ಸಂಚರಿಸುವಾಗ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವ ದ್ವಿಚಕ್ರ ವಾಹನಗಳಿಂದ ಪಾದಚಾರಿಗಳಿಗೆ ನಡೆದಾಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಜೆಪ್ಪು ಮಾರ್ಕೆಟ್,ಮಹಾಲಸಾ ಕಂಪ್ಯೂಟರ್ ಕೇಂದ್ರ, ಪ್ರಧಾನ ಮಂತ್ರಿ ಜನೌಷಧಿ,ಬ್ಯಾಂಕುಗಳಿಗೆ ನಿತ್ಯ ದೈನಂದಿನ ತಮ್ಮ ವ್ಯವಹಾರಗಳಿಗೆ ತೆರಳುವವರಿಗೆ ಈ ಭಾಗದಲ್ಲಿ ನಡೆದಾಡುವುದು ದುಸ್ತರ ಎನಿಸಿದೆ.
ಆಯಾಯ ಕಟ್ಟಡಗಳಲ್ಲಿ ಪಾರ್ಕಿಂಗ್ ಮಾಡದೇ ಜನರು ನಡೆದಾಡುವ ಜಾಗದಲ್ಲಿ ಮತ್ತು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವವರಿಗೆ ಸಂಬಂಧ ಪಟ್ಟವರು ದಂಡ ವಿಧಿಸುವ ಅಗತ್ಯತೆ ಇದೆ. ಪ್ರಮುಖವಾಗಿ ಈ ಪ್ರದೇಶದ ಸ್ಥಳೀಯ ಜನಪ್ರತಿನಿಧಿಗಳು ಪಾದಚಾರಿಗಳಿಗೆ ನಡೆದಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಿ ಪಾದಚಾರಿಗಳಿಗೆ ಪ್ರಾಣಕ್ಕೆ ಸಂಕಷ್ಟ ಎದುರಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು