2:57 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mangaluru | ನಾಲ್ಕನೇ ವರ್ಷದ ಕುಡ್ಲದ ಪಿಲಿಪರ್ಬ-2025ರ ಚಪ್ಪರ ಮುಹೂರ್ತ

22/09/2025, 20:09

ಮಂಗಳೂರು(reporterkarnataka.com):ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ನಾಲ್ಕನೇ ವರ್ಷದ “ಕುಡ್ಲದ ಪಿಲಿ ಪರ್ಬ-2025” ದ ಚಪ್ಪರ ಮುಹೂರ್ತ ಕಾರ್ಯಕ್ರಮ ನಗರದ ಕೇಂದ್ರ ಮೈದಾನದಲ್ಲಿ ನಡೆಯಿತು.


ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು “ದಸರಾ ಸಂದರ್ಭದಲ್ಲಿ ಇಡೀ ತುಳುನಾಡಿನಲ್ಲೇ ಹುಲಿವೇಷದ ಸಂಭ್ರಮ ಮನೆ ಮಾಡಿರುತ್ತದೆ. ಇಂದು ಈ ನೆಲದ ಕಲೆ ತುಳುನಾಡು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಸಪ್ಟೆಂಬರ್ 30ರ ಮಂಗಳವಾರದಂದು ನಡೆಯಲಿರುವ ನಾಲ್ಕನೇ ವರ್ಷದ ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ ಹುಲಿವೇಷ ತಂಡಗಳಿಗೂ ಶುಭಹಾರೈಕೆಗಳು. ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಲಿರುವ ಸಾರ್ವಜನಿಕರೆಲ್ಲರಿಗೂ ಪ್ರೀತಿಯ ಸ್ವಾಗತ ಬಯಸುತ್ತಾ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಸಾಧಿಸಲಿ, ಎಂದು ಶುಭ ಹಾರೈಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪ್ರಮುಖರಾದ ನರೇಶ್ ಶೆಣೈ, ಅಶ್ವಿತ್ ಕೊಟ್ಟಾರಿ, ನರೇಶ್ ಪ್ರಭು, ಲಲಿತ್ ಮೆಂಡನ್, ಜಗದೀಶ್ ಕದ್ರಿ, ಬಿಜೆಪಿಯ ನಿಕಟಪೂರ್ವ ಪಾಲಿಕೆ ಸದಸ್ಯರುಗಳು, ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು