4:23 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

Mangaluru | ನಾಲ್ಕನೇ ವರ್ಷದ ಕುಡ್ಲದ ಪಿಲಿಪರ್ಬ-2025ರ ಚಪ್ಪರ ಮುಹೂರ್ತ

22/09/2025, 20:09

ಮಂಗಳೂರು(reporterkarnataka.com):ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ನಾಲ್ಕನೇ ವರ್ಷದ “ಕುಡ್ಲದ ಪಿಲಿ ಪರ್ಬ-2025” ದ ಚಪ್ಪರ ಮುಹೂರ್ತ ಕಾರ್ಯಕ್ರಮ ನಗರದ ಕೇಂದ್ರ ಮೈದಾನದಲ್ಲಿ ನಡೆಯಿತು.


ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು “ದಸರಾ ಸಂದರ್ಭದಲ್ಲಿ ಇಡೀ ತುಳುನಾಡಿನಲ್ಲೇ ಹುಲಿವೇಷದ ಸಂಭ್ರಮ ಮನೆ ಮಾಡಿರುತ್ತದೆ. ಇಂದು ಈ ನೆಲದ ಕಲೆ ತುಳುನಾಡು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಸಪ್ಟೆಂಬರ್ 30ರ ಮಂಗಳವಾರದಂದು ನಡೆಯಲಿರುವ ನಾಲ್ಕನೇ ವರ್ಷದ ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ ಹುಲಿವೇಷ ತಂಡಗಳಿಗೂ ಶುಭಹಾರೈಕೆಗಳು. ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಲಿರುವ ಸಾರ್ವಜನಿಕರೆಲ್ಲರಿಗೂ ಪ್ರೀತಿಯ ಸ್ವಾಗತ ಬಯಸುತ್ತಾ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಸಾಧಿಸಲಿ, ಎಂದು ಶುಭ ಹಾರೈಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪ್ರಮುಖರಾದ ನರೇಶ್ ಶೆಣೈ, ಅಶ್ವಿತ್ ಕೊಟ್ಟಾರಿ, ನರೇಶ್ ಪ್ರಭು, ಲಲಿತ್ ಮೆಂಡನ್, ಜಗದೀಶ್ ಕದ್ರಿ, ಬಿಜೆಪಿಯ ನಿಕಟಪೂರ್ವ ಪಾಲಿಕೆ ಸದಸ್ಯರುಗಳು, ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು