10:41 AM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಜಿದ್ದಾ ವಿಮಾನ ನಿಲ್ದಾಣ: ಊರಿಗೆ ಬರಲು ಏರ್ ಪೋರ್ಟ್ ಆಗಮಿಸಿದ ಬೆಳ್ತಂಗಡಿ ನಿವಾಸಿ ಹೃದಯಾಘಾತಕ್ಕೆ ಬಲಿ

14/02/2025, 13:18

ಜಿದ್ದಾ(reporterkarnataka.com): ಊರಿಗೆ ಮರಳಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬೆಳ್ತಂಗಡಿಯ ಸಂಜಯನಗರ ನಿವಾಸಿ
ಹಿದಾಯತ್ ಅವರು ಜಿದ್ದಾ ವಿಮಾನ ನಿಲ್ದಾಣದಲ್ಲೇ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆ ಗುರುವಾರ ರಾತ್ರಿ ನಡೆದಿದೆ.
ಜಿದ್ದಾದಿಂದ ರಾತ್ರಿ 10:30ರ ವಿಮಾನದಲ್ಲಿ ಹೊರಟು ಹಿದಾಯತ್ ಅವರು ಶುಕ್ರವಾರ ಬೆಳಗಿನ ಜಾವ ಮಂಗಳೂರು ವಿಮಾನ ನಿಲ್ದಾಣ
ತಲುಪುವವರಿದ್ದರು. ಈ ಹಿನ್ನೆಲೆಯಲ್ಲಿ ಹಿದಾಯತ್ ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಶುಕ್ರವಾರ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ ಕಾರನ್ನು ತರಲು ಹೇಳಿದ್ದರು. ಆದರೆ ಹಿದಾಯತ್ ಅವರು ಊರಿಗೆ ಬರಲು ಗುರುವಾರ ರಾತ್ರಿ ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ತಕ್ಷಣ ಅವರನ್ನು ಅಲ್ಲಿನ ವಿಮಾನ ನಿಲ್ದಾಣದ ಪಕ್ಕದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಉತ್ತಮ ಗಾಯಕರಾಗಿದ್ದ ಅವರು ಉದ್ಯೋಗ ನಿಮಿತ್ತ ಅವರು ಬಹರೈನ್ ಗೆ ತೆರಳಿದ್ದರು. ಬಳಿಕ ಸೌದಿ ಅರೇಬಿಯಾಕ್ಕೆ ತೆರಳಿದ್ದು ಕಾರ್ಗೊ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಮೃತರು ತಂದೆ , ತಾಯಿ, ಪತ್ನಿ ಹಾಗೂ ಒಂದು ಗಂಡು,ಮೂರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು