7:32 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಿಜೆಪಿ ಮುಖಂಡ ಶಾಮಣ್ಣ ಬಣಕಲ್ ಹೃದಯಾಘಾತಕ್ಕೆ ಬಲಿ

09/08/2024, 11:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಮಣ್ಣ ಬಣಕಲ್ ತೀವ್ರ ಹೃದಯಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ಬುಧವಾರ ಬಣಕಲ್ ಪೇಟೆಯಲ್ಲಿ ಹಠಾತ್ತನೆ ಹೃದಯಾಘಾತದಿಂದ ಕುಸಿದು ಬಿದ್ದರು. ತಕ್ಷಣ ಅವರನ್ನು ಬಣಕಲ್ ಹಾಗೂ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬೆಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಬೆಂಗಳೂರು ಆಸ್ಪತ್ರೆ ತಲುಪಿದಾಗಲೇ ಅವರು ಕೊನೆಯುಸಿರೆಳೆದಿದ್ದರು. ಶಾಮಣ್ಣ ಅವರು ಮೂಡಿಗೆರೆ ತಾಲ್ಲೂಕಿನ ಬಣಕಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಜಿಪಂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು. ಬಣಕಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಣಕಲ್ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪ್ರಸ್ತುತ ನಿರ್ದೇಶಕರಾಗಿದ್ದರು.


ಅಪಾರ ಜ್ಞಾನವಂತರಾಗಿದ್ದ ಶಾಮಣ್ಣ ಅವರು ರಾಜಕೀಯದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದರು. ಅಪಾರ ಸ್ನೇಹ ಬಳಗ ಹೊಂದಿದ್ದರು. ಅವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಹಕಾರ ಕ್ಷೇತ್ರದ ಮುಖಂಡರು, ಸಾರ್ವಜನಿಕರು, ಅಭಿಮಾನಿ ಬಳಗದವರು ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಸಬ್ಲಿ ಗ್ರಾಮದಲ್ಲಿ ಸಾವಿರಾರು ಜನರು ಮೃತರ ಅಂತಿಮ ದರ್ಶನ ಪಡೆದರು. ಬಿಜೆಪಿ ಪಕ್ಷದಿಂದ ಶಾಮಣ್ಣ ಅವರ ಮೃತ ದೇಹಕ್ಕೆ ಬಿಜೆಪಿ ಬಾವುಟ ಹೊದಿಸಿ ಅಂತಿಮ ನಮನ ಸಲ್ಲಿಸಿದರು ಮೃತರ ಅಂತ್ಯಕ್ರಿಯೆಯು ಗುರುವಾರ ಸಂಜೆ ಸಬ್ಲಿ ರುದ್ರಭೂಮಿಯಲ್ಲಿ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು