4:56 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಿಜೆಪಿ ಮುಖಂಡ ಶಾಮಣ್ಣ ಬಣಕಲ್ ಹೃದಯಾಘಾತಕ್ಕೆ ಬಲಿ

09/08/2024, 11:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಮಣ್ಣ ಬಣಕಲ್ ತೀವ್ರ ಹೃದಯಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ಬುಧವಾರ ಬಣಕಲ್ ಪೇಟೆಯಲ್ಲಿ ಹಠಾತ್ತನೆ ಹೃದಯಾಘಾತದಿಂದ ಕುಸಿದು ಬಿದ್ದರು. ತಕ್ಷಣ ಅವರನ್ನು ಬಣಕಲ್ ಹಾಗೂ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬೆಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಬೆಂಗಳೂರು ಆಸ್ಪತ್ರೆ ತಲುಪಿದಾಗಲೇ ಅವರು ಕೊನೆಯುಸಿರೆಳೆದಿದ್ದರು. ಶಾಮಣ್ಣ ಅವರು ಮೂಡಿಗೆರೆ ತಾಲ್ಲೂಕಿನ ಬಣಕಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಜಿಪಂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು. ಬಣಕಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಣಕಲ್ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪ್ರಸ್ತುತ ನಿರ್ದೇಶಕರಾಗಿದ್ದರು.


ಅಪಾರ ಜ್ಞಾನವಂತರಾಗಿದ್ದ ಶಾಮಣ್ಣ ಅವರು ರಾಜಕೀಯದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದರು. ಅಪಾರ ಸ್ನೇಹ ಬಳಗ ಹೊಂದಿದ್ದರು. ಅವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಹಕಾರ ಕ್ಷೇತ್ರದ ಮುಖಂಡರು, ಸಾರ್ವಜನಿಕರು, ಅಭಿಮಾನಿ ಬಳಗದವರು ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಸಬ್ಲಿ ಗ್ರಾಮದಲ್ಲಿ ಸಾವಿರಾರು ಜನರು ಮೃತರ ಅಂತಿಮ ದರ್ಶನ ಪಡೆದರು. ಬಿಜೆಪಿ ಪಕ್ಷದಿಂದ ಶಾಮಣ್ಣ ಅವರ ಮೃತ ದೇಹಕ್ಕೆ ಬಿಜೆಪಿ ಬಾವುಟ ಹೊದಿಸಿ ಅಂತಿಮ ನಮನ ಸಲ್ಲಿಸಿದರು ಮೃತರ ಅಂತ್ಯಕ್ರಿಯೆಯು ಗುರುವಾರ ಸಂಜೆ ಸಬ್ಲಿ ರುದ್ರಭೂಮಿಯಲ್ಲಿ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು