9:24 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಿಜೆಪಿ ಮುಖಂಡ ಶಾಮಣ್ಣ ಬಣಕಲ್ ಹೃದಯಾಘಾತಕ್ಕೆ ಬಲಿ

09/08/2024, 11:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಮಣ್ಣ ಬಣಕಲ್ ತೀವ್ರ ಹೃದಯಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ಬುಧವಾರ ಬಣಕಲ್ ಪೇಟೆಯಲ್ಲಿ ಹಠಾತ್ತನೆ ಹೃದಯಾಘಾತದಿಂದ ಕುಸಿದು ಬಿದ್ದರು. ತಕ್ಷಣ ಅವರನ್ನು ಬಣಕಲ್ ಹಾಗೂ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬೆಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಬೆಂಗಳೂರು ಆಸ್ಪತ್ರೆ ತಲುಪಿದಾಗಲೇ ಅವರು ಕೊನೆಯುಸಿರೆಳೆದಿದ್ದರು. ಶಾಮಣ್ಣ ಅವರು ಮೂಡಿಗೆರೆ ತಾಲ್ಲೂಕಿನ ಬಣಕಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಜಿಪಂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು. ಬಣಕಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಣಕಲ್ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪ್ರಸ್ತುತ ನಿರ್ದೇಶಕರಾಗಿದ್ದರು.


ಅಪಾರ ಜ್ಞಾನವಂತರಾಗಿದ್ದ ಶಾಮಣ್ಣ ಅವರು ರಾಜಕೀಯದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದರು. ಅಪಾರ ಸ್ನೇಹ ಬಳಗ ಹೊಂದಿದ್ದರು. ಅವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಹಕಾರ ಕ್ಷೇತ್ರದ ಮುಖಂಡರು, ಸಾರ್ವಜನಿಕರು, ಅಭಿಮಾನಿ ಬಳಗದವರು ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಸಬ್ಲಿ ಗ್ರಾಮದಲ್ಲಿ ಸಾವಿರಾರು ಜನರು ಮೃತರ ಅಂತಿಮ ದರ್ಶನ ಪಡೆದರು. ಬಿಜೆಪಿ ಪಕ್ಷದಿಂದ ಶಾಮಣ್ಣ ಅವರ ಮೃತ ದೇಹಕ್ಕೆ ಬಿಜೆಪಿ ಬಾವುಟ ಹೊದಿಸಿ ಅಂತಿಮ ನಮನ ಸಲ್ಲಿಸಿದರು ಮೃತರ ಅಂತ್ಯಕ್ರಿಯೆಯು ಗುರುವಾರ ಸಂಜೆ ಸಬ್ಲಿ ರುದ್ರಭೂಮಿಯಲ್ಲಿ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು