10:19 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಜಿಲ್ಲಾ ಪೊಲೀಸ್‌ ಗ್ರೌಂಡ್‌ನಲ್ಲಿ ಕ್ರಿಮಿನಲ್ ಗಳ ಪರೇಡ್ : ‘ಯಾಕಪ್ಪ ಇಷ್ಟು ಟ್ಯಾಟೋ ಹಾಕಿಸಿಕೊಂಡಿದ್ದೀಯಾ’ ಅಂತ ಪ್ರಶ್ನಿಸಿದ ಪೊಲೀಸ್ ಕಮಿಷನರ್

06/07/2022, 19:25

ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿರುವ ಕ್ರಿಮಿನಲ್‌ಗಳ ಪರೇಡ್‌ ಇಂದು ನಗರದ ಜಿಲ್ಲಾ ಪೊಲೀಸ್‌ ಗ್ರೌಂಡ್‌ನಲ್ಲಿ ನಡೆಯಿತು. 


275 ಕ್ರಿಮಿನಲ್‌ಗಳು ಪರೇಡ್‌ನಲ್ಲಿ ಭಾಗವಹಿಸಿದ್ದರು.ಇದರಲ್ಲಿ ರಾಜ್ಯಾದಾದ್ಯಂತ ಸುದ್ದಿ ಮಾಡಿದ್ದ ಡ್ರಗ್‌ ಪ್ರಕರಣದ ಆರೋಪಿ ಕಿಶೋರ್‌ ಅಮನ್‌ ಕಂಡು ಪೊಲೀಸ್‌ ಕಮೀಷನರ್‌ ಎನ್‌. ಶಶಿಕುಮಾರ್‌ ಶರ್ಟ್ ಬಿಚ್ಚಿಸಿ ಆತನ ಕತ್ತಿನಲ್ಲಿದ್ದ ಹಾರ ಮತ್ತು ಎದೆಯ ಮೇಲಿದ್ದ ಟ್ಯಾಟೂ ನೊಡಿ ‘ಏನಪ್ಪಾ ಮೈ ಮೇಲೆ ಇಷ್ಟು ಟ್ಯಾಟೋ ಹಾಕಿಸಿಕೊಂಡಿದ್ಯಾ’ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಕಿಶೋರ್ ಶೆಟ್ಟಿ, ತಾಯಿಯ ಟ್ಯಾಟೂ ಹಾಕಿರುವೆ ಎಂದಾಗ ‘ಮಾಡೋದೆಲ್ಲಾ ಮಾಡಿ ತಾಯಿಯದ್ದು ಯಾಕೆ ಹಾಕಿಸಿಕೊಂಡಿದ್ದೀಯಾ‌. ನೆಟ್ಟಗೆ ಬಾಳಿದರೆ ಸಾಕು ಹಚ್ಚೆ ಹಾಕಿಸಿಕೊಳ್ಳಬೇಕಿಲ್ಲ ಎಂದು ಹೇಳಿದ ಅವರು ನೀನು ಡ್ರಗ್ಸ್‌ ತಿಂತೀಯಾ ಅಥವಾ ಬೇರೆಯವರಿಗೆ ತಿನ್ನಿಸೋದಷ್ಟೇನಾ ಎಂದು ಕ್ಲಾಸ್‌ ತೆಗೆದುಕೊಂಡರು. ಜೊತೆಗೆ ಕಳ್ಳತನ  ಪ್ರಕರಣದ ಆರೋಪಿಗಳ ಬಳಿ ಐಫೋನ್‌ಗಳನ್ನು ಕಂಡು ಹಾಗೂ ಗೋಕಳ್ಳತನ ಆರೋಪಿಗಳ ಪರ್ಸ್‌ನಲ್ಲಿದ್ದ ಸಾವಿರಾರು ರೂಪಾಯಿ ನೋಟು ನೋಡಿ ದಂಗಾದರು.

ಇತ್ತೀಚಿನ ಸುದ್ದಿ

ಜಾಹೀರಾತು