1:55 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಸುನಿಲ್ – ದ.ಕ., ಅಂಗಾರ- ಉಡುಪಿ, ಕೋಟಾ- ಉತ್ತರ ಕನ್ನಡ

24/01/2022, 17:23

ಬೆಂಗಳೂರು(reporterkarnataka.com):

ರಾಜ್ಯದ 28 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ವಿ. ಸುನಿಲ್ ಕುಮಾರ್ ಹಾಗೂ ಉಡುಪಿಗೆ ಎಸ್. ಅಂಗಾರವನ್ನು ನೇಮಿಸಲಾಗಿದೆ.

ದ.ಕ. ಉಸ್ತುವಾರಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೆರೆಯ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುವರು.

ಉಳಿದಂತೆ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ, ಗೋವಿಂದ ಜಾರಜೋಳ ವಿಜಯಪುರ, ಶ್ರೀರಾಮುಲು ಬಳ್ಳಾರಿ, ಬಿ.ಸಿ. ಪಾಟೀಲ್ ಚಿತ್ರದುರ್ಗ, ಶಶಿಕಲಾ ಜೊಲ್ಲೆ ವಿಜಯನಗರ,
ಅರಗ ಜ್ಞಾನೇಂದ್ರ ತುಮಕೂರು ಜಿಲ್ಲೆಯ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು