5:38 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿಗಳು ಮಹಾರಾಜರಲ್ಲ; ಅಧಿಕಾರಿಗಳ ಜತೆ ಸಮನ್ವಯತೆಯಿಂದ ಕೆಲಸ ಮಾಡಿ ಡೆಂಗ್ಯು ನಿಯಂತ್ರಿಸಿ: ಸಿಎಂ ಸಿದ್ದರಾಮಯ್ಯ

08/07/2024, 18:38

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎಂಬ ಭಾವನೆ ಇದ್ದರೆ ಪ್ರಗತಿ ಮತ್ತು ಅಭಿವೃದ್ಧಿ ಸಾಧ್ಯವಿಲ್ಲ. ಇಷ್ಟರವರೆಗೆ ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳಹಂತದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ(ಸಿಇಒ) ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನಸೇವಕರು ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಬೇಕು. ಸರಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಸಮನ್ವಯತೆಯಿಂದ ಕ್ರಿಯಾಶೀಲತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರಕಾರದ ಯೋಜನೆಗಳು, ಕಾರ್ಯಕ್ರಮಗಳು ಜನರಿಗೆ ತಲುಪಲು ಸಾಧ್ಯ. ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಾಗಿ ಕೆಲಸ ಮಾಡಿ. ಜಿಲ್ಲಾಧಿಕಾರಿಗಳು ಕೆಳ ಹಂತದ ಅಧಿಕಾರಿಗಳ ಜತೆ ಸಭೆ ನಡೆಸಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚನೆ ನೀಡಿದರು.
ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಚಿವರಾದ ಎಂ.ಬಿ. ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು